<p><strong>ರಾಮದುರ್ಗ</strong>: ‘ತಾಲ್ಲೂಕಿನ ಬಹುಗಾತ್ರದ ಸುರೇಬಾನ–ಮನಿಹಾಳ ಗ್ರಾಮಗಳನ್ನು ಒಟ್ಟುಗೂಡಿಸಿ ಪಟ್ಟಣ ಪಂಚಾಯ್ತಿ ಮಾಡಲು ಒಪ್ಪಿಗೆ ಸೂಚಿಸಿದರೆ, ಅಗತ್ಯ ಕ್ರಮ ತೆಗೆದುಕೊಂಡು ಪಟ್ಟಣ ಪಂಚಾಯ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ಸುರೇಬಾನ ಹೋಬಳಿ ವ್ಯಾಪ್ತಿಯ ರೇವಡಿಕೊಪ್ಪ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಪರಿಶಿಷ್ಟ ಜಾತಿ, ಜನಾಂಗದವರ ಕಾಲೊನಿಗಳಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗ್ರಾಮಗಳಲ್ಲಿ ಒಳ ರಸ್ತೆಗಳು, ಲೋಕೋಪಯೋಗಿ ರಸ್ತೆಗಳು, ರೈತರ ಜಮೀನುಗಳಿಗೆ ಹೋಗುವ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದಿಂದ ಹಂತಹಂತವಾಗಿ ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ತಿಳಿಸಿದರು.</p>.<p>‘ಪರಿಶಿಷ್ಟರ ಹಣದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿಯನ್ನು ಅಚ್ಚುಕಟ್ಟಾಗಿ ನಿರ್ಮಿಸಬೇಕು. ಕಳಪೆ ಕಾಮಗಾರಿಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕಳಪೆಯಾದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.</p>.<p>ಸುರೇಬಾನ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗರತ್ನ ಜಡಿ, ಉಪಾಧ್ಯಕ್ಷೆ ಬಸವ್ವ ಭಜಂತ್ರಿ, ಶಾಂತವ್ವ ಮಾದರ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಂಕ್ರಯ್ಯ ಹಿರೇಮಠ, ಪಿಡಿಒ ಈರನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕಿ ಸುನಂದಾ ವಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮದುರ್ಗ</strong>: ‘ತಾಲ್ಲೂಕಿನ ಬಹುಗಾತ್ರದ ಸುರೇಬಾನ–ಮನಿಹಾಳ ಗ್ರಾಮಗಳನ್ನು ಒಟ್ಟುಗೂಡಿಸಿ ಪಟ್ಟಣ ಪಂಚಾಯ್ತಿ ಮಾಡಲು ಒಪ್ಪಿಗೆ ಸೂಚಿಸಿದರೆ, ಅಗತ್ಯ ಕ್ರಮ ತೆಗೆದುಕೊಂಡು ಪಟ್ಟಣ ಪಂಚಾಯ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.</p>.<p>ಸುರೇಬಾನ ಹೋಬಳಿ ವ್ಯಾಪ್ತಿಯ ರೇವಡಿಕೊಪ್ಪ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಪರಿಶಿಷ್ಟ ಜಾತಿ, ಜನಾಂಗದವರ ಕಾಲೊನಿಗಳಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗ್ರಾಮಗಳಲ್ಲಿ ಒಳ ರಸ್ತೆಗಳು, ಲೋಕೋಪಯೋಗಿ ರಸ್ತೆಗಳು, ರೈತರ ಜಮೀನುಗಳಿಗೆ ಹೋಗುವ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದಿಂದ ಹಂತಹಂತವಾಗಿ ಅನುದಾನ ಬಿಡುಗಡೆ ಮಾಡಿಸಿ ಅಭಿವೃದ್ಧಿ ಪಡಿಸಲಾಗುವುದು’ ಎಂದು ತಿಳಿಸಿದರು.</p>.<p>‘ಪರಿಶಿಷ್ಟರ ಹಣದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿಯನ್ನು ಅಚ್ಚುಕಟ್ಟಾಗಿ ನಿರ್ಮಿಸಬೇಕು. ಕಳಪೆ ಕಾಮಗಾರಿಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕಳಪೆಯಾದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.</p>.<p>ಸುರೇಬಾನ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗರತ್ನ ಜಡಿ, ಉಪಾಧ್ಯಕ್ಷೆ ಬಸವ್ವ ಭಜಂತ್ರಿ, ಶಾಂತವ್ವ ಮಾದರ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಶಂಕ್ರಯ್ಯ ಹಿರೇಮಠ, ಪಿಡಿಒ ಈರನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕಿ ಸುನಂದಾ ವಾಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>