ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನೇಕ ಯೋಜನೆಗಳ ರೂವಾರಿ ಸುರೇಶ ಅಂಗಡಿ: ಪ್ರಭಾಕರ ಕೋರೆ

Last Updated 24 ಸೆಪ್ಟೆಂಬರ್ 2020, 5:00 IST
ಅಕ್ಷರ ಗಾತ್ರ

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಕಂಬನಿ ಮಿಡಿದಿದ್ದಾರೆ.

‘30 ವರ್ಷಗಳಿಂದ ನನಗೆ ಒಡನಾಡಿಯಾಗಿದ್ದ ಅಂಗಡಿ ಅವರು 4 ಬಾರಿ ಸಂಸದರಾಗಿ, ಈ ಅವಧಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ನಿಧನದಿಂದಾಗಿ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡು ಬೆಳಗಾವಿ ಜಿಲ್ಲೆಯು ಬಡವಾಗಿದೆ. ರೈಲ್ವೆ ಸಚಿವರಾದ ಬಳಿಕ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ತಂದಿದ್ದರು. ಅವುಗಳನ್ನು ತ್ವರಿತವಾಗಿ ಕಾರ್ಯ ರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು’ ಎಂದು ನೆನೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT