‘30 ವರ್ಷಗಳಿಂದ ನನಗೆ ಒಡನಾಡಿಯಾಗಿದ್ದ ಅಂಗಡಿ ಅವರು 4 ಬಾರಿ ಸಂಸದರಾಗಿ, ಈ ಅವಧಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ನಿಧನದಿಂದಾಗಿ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡು ಬೆಳಗಾವಿ ಜಿಲ್ಲೆಯು ಬಡವಾಗಿದೆ. ರೈಲ್ವೆ ಸಚಿವರಾದ ಬಳಿಕ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ತಂದಿದ್ದರು. ಅವುಗಳನ್ನು ತ್ವರಿತವಾಗಿ ಕಾರ್ಯ ರೂಪಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು’ ಎಂದು ನೆನೆದಿದ್ದಾರೆ.