ತೆಲಸಂಗ: ‘ಗಾಳಿ–ಮಳೆಯಿಂದಾದ ಬೆಳೆ ಹಾನಿ ಕುರಿತು ಸಂಪೂರ್ಣ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು’ ಎಂದು ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ ತಿಳಿಸಿದರು.
ಇಲ್ಲಿ ಹಾನಿಯಾದ ಬೆಳೆಗಳನ್ನು ಶನಿವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮೀಕ್ಷೆ ನಡೆಸಲಾಗುತ್ತಿದೆ. ತೊಗರಿ ಬೆಳೆಗಾರರಿಗೆ ನಷ್ಟವಾಗಿದ್ದು ಕಂಡು ಬರುತ್ತಿದೆ. ನೀರು ಸಂಗ್ರಹವಾದ ಜಮೀನಿನಲ್ಲಿ ತೊಗರಿ ಸಂಪೂರ್ಣ ಹಾನಿಗೊಳಗಾಗಿದೆ. ರೈತರಿಗಾದ ನಷ್ಟದ ವಾಸ್ತವ ವರದಿ ನೀಡಲಾಗುವುದು’ ಎಂದರು.
ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ, ‘ಹೋಬಳಿಯಲ್ಲಿ ತೊಗರಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ. ಸದ್ಯ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ, ಕೃಷಿ ಸಹಾಯಕರಾದ ಕೆ.ಡಿ. ಹುಣಸಿಕಟ್ಟಿ, ಪಿ.ಎಂ. ವಾಲಿ, ಕಾಮಗೊಂಡ ಇದ್ದರು.