<p><strong>ತೆಲಸಂಗ:</strong> ‘ಗಾಳಿ–ಮಳೆಯಿಂದಾದ ಬೆಳೆ ಹಾನಿ ಕುರಿತು ಸಂಪೂರ್ಣ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು’ ಎಂದು ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ ತಿಳಿಸಿದರು.</p>.<p>ಇಲ್ಲಿ ಹಾನಿಯಾದ ಬೆಳೆಗಳನ್ನು ಶನಿವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮೀಕ್ಷೆ ನಡೆಸಲಾಗುತ್ತಿದೆ. ತೊಗರಿ ಬೆಳೆಗಾರರಿಗೆ ನಷ್ಟವಾಗಿದ್ದು ಕಂಡು ಬರುತ್ತಿದೆ. ನೀರು ಸಂಗ್ರಹವಾದ ಜಮೀನಿನಲ್ಲಿ ತೊಗರಿ ಸಂಪೂರ್ಣ ಹಾನಿಗೊಳಗಾಗಿದೆ. ರೈತರಿಗಾದ ನಷ್ಟದ ವಾಸ್ತವ ವರದಿ ನೀಡಲಾಗುವುದು’ ಎಂದರು.</p>.<p>ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ, ‘ಹೋಬಳಿಯಲ್ಲಿ ತೊಗರಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ. ಸದ್ಯ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ಹೇಳಿದರು.</p>.<p>ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ, ಕೃಷಿ ಸಹಾಯಕರಾದ ಕೆ.ಡಿ. ಹುಣಸಿಕಟ್ಟಿ, ಪಿ.ಎಂ. ವಾಲಿ, ಕಾಮಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೆಲಸಂಗ:</strong> ‘ಗಾಳಿ–ಮಳೆಯಿಂದಾದ ಬೆಳೆ ಹಾನಿ ಕುರಿತು ಸಂಪೂರ್ಣ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು’ ಎಂದು ಸಹಾಯಕ ಕೃಷಿ ನಿರ್ದೇಶಕಿ ಜಯಶ್ರೀ ಹಿರೇಮಠ ತಿಳಿಸಿದರು.</p>.<p>ಇಲ್ಲಿ ಹಾನಿಯಾದ ಬೆಳೆಗಳನ್ನು ಶನಿವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮೀಕ್ಷೆ ನಡೆಸಲಾಗುತ್ತಿದೆ. ತೊಗರಿ ಬೆಳೆಗಾರರಿಗೆ ನಷ್ಟವಾಗಿದ್ದು ಕಂಡು ಬರುತ್ತಿದೆ. ನೀರು ಸಂಗ್ರಹವಾದ ಜಮೀನಿನಲ್ಲಿ ತೊಗರಿ ಸಂಪೂರ್ಣ ಹಾನಿಗೊಳಗಾಗಿದೆ. ರೈತರಿಗಾದ ನಷ್ಟದ ವಾಸ್ತವ ವರದಿ ನೀಡಲಾಗುವುದು’ ಎಂದರು.</p>.<p>ಕೃಷಿ ಅಧಿಕಾರಿ ಯಂಕಪ್ಪ ಉಪ್ಪಾರ, ‘ಹೋಬಳಿಯಲ್ಲಿ ತೊಗರಿ ಬೆಳೆಗಾರರ ಸಂಖ್ಯೆ ಹೆಚ್ಚಿದೆ. ಸದ್ಯ ಮಳೆಯಿಂದ ಬೆಳೆಗೆ ಹಾನಿಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ಹೇಳಿದರು.</p>.<p>ಗ್ರಾಮ ಲೆಕ್ಕಾಧಿಕಾರಿ ಬಿ.ಜಿ. ಇರಕಾರ, ಕೃಷಿ ಸಹಾಯಕರಾದ ಕೆ.ಡಿ. ಹುಣಸಿಕಟ್ಟಿ, ಪಿ.ಎಂ. ವಾಲಿ, ಕಾಮಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>