ಅರಬಾಜ್ ಮೂಲತಃ ಖಾನಾಪುರದವರಾಗಿದ್ದರು. ಇತ್ತೀಚೆಗೆ ಬೆಳಗಾವಿಗೆ ವಾಸ್ತವ್ಯ ಬದಲಾಯಿಸಿದ್ದರು. ಸೆ.27ರಂದು ಸ್ನೇಹಿತರನ್ನು ಭೇಟಿಯಾಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದರು. ಮರುದಿನ ರೈಲ್ವೆ ಹಳಿಗಳ ಮೇಲೆ ಅವರ ಶವ ದೊರೆತಿತ್ತು. ಮೃತದೇಹವನ್ನು ಹಗ್ಗದಿಂದ ಕಟ್ಟಲಾಗಿತ್ತು. ತಲೆಯ ಮೇಲೆ ಗಾಯಗಳಿದ್ದವು. ಇವುಗಳನ್ನು ಗಮನಿಸಿದ ರೈಲ್ವೆ ಪೊಲೀಸರು, ಯುವಕನನ್ನು ಬೇರೆಡೆ ಕೊಲೆಗೈದು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರೈಲ್ವೆ ಹಳಿಗಳ ಮೇಲೆ ಎಸೆದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.