'ವಿರೋಧ ಪಕ್ಷದವರನ್ನು ಹೊರಗಿಟ್ಟು ವಿಧೇಯಕಗಳನ್ನು ಪಾಸ್ ಮಾಡಿಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಹೀಗಾಗಿ ನಮ್ಮನ್ನು ಹೊರಗೇ ತಡೆದಿದ್ದಾರೆ. ತಮ್ಮ ಭ್ರಷ್ಟಾಚಾರವನ್ನು ಮುಚ್ಚಿಟ್ಟುಕೊಳ್ಳಲು ವ್ಯವಸ್ಥಿತವಾದ ಹುನ್ನಾರ ನಡೆಸುತ್ತಿದ್ದಾರೆ. ವಿರೋಧ ಪಕ್ಷದವರು ಬಂದರೆ ಸರ್ಕಾರದ ಭ್ರಷ್ಟಾಚಾರ ಹೊರತೆಗೆಯುತ್ತಾರೆ ಎಂದು ಸರ್ಕಾರದವರು ಹೆದರುತ್ತಿದ್ದಾರೆ' ಎಂದು ಸಿದ್ದರಾಮಯ್ಯ ದೂರಿದರು.