ಉಗರಗೋಳ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. ಎಲ್ಲ ಸಮಾಜದವರೂ ಸೌಹಾರ್ದದಿಂದ ಬದುಕಬೇಕು’ ಎಂದು ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ವೈ.ವೈ. ಕಾಳಪ್ಪನವರ ಹೇಳಿದರು.
ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಸವದತ್ತಿ ಮಂಡಳದಿಂದ ಸೋಮವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಎಲ್ಲರೂ ಸಮಾನರಾಗಿ ಬದುಕಬೇಕೆಂಬ ಆಶಯದಿಂದ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ಅವರ ಕನಸನ್ನು ನನಸಾಗಿಸಬೇಕು’ ಎಂದರು.
ಯಲ್ಲಮ್ಮ ದೇವಸ್ಥಾನ ಪ್ರಾಂಗಣ, ಎಣ್ಣೆಹೊಂಡ ಬಳೆಗಾರ ಪೇಟೆ ಮತ್ತಿತರ ಕಡೆಗಳಲ್ಲಿ ಸ್ವಚ್ಛಗೊಳಿಸಿ ಕಾರ್ಯಕರ್ತರು ಶ್ರಮದಾನ ಮಾಡಿದರು. ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗಳನ್ನು ಸತ್ಕರಿಸಿದರು.