ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರೂ ಸೌಹಾರ್ದದಿಂದ ಇರಬೇಕು- ವೈ.ವೈ. ಕಾಳಪ್ಪನವರ

Last Updated 11 ಏಪ್ರಿಲ್ 2022, 16:06 IST
ಅಕ್ಷರ ಗಾತ್ರ

ಉಗರಗೋಳ: ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಗಳಿಗೆ ಪೂರಕವಾಗಿ ಪ್ರತಿಯೊಬ್ಬರೂ ನಡೆದುಕೊಳ್ಳಬೇಕು. ಎಲ್ಲ ಸಮಾಜದವರೂ ಸೌಹಾರ್ದದಿಂದ ಬದುಕಬೇಕು’ ಎಂದು ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ವೈ.ವೈ. ಕಾಳಪ್ಪನವರ ಹೇಳಿದರು.

ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಸವದತ್ತಿ ಮಂಡಳದಿಂದ ಸೋಮವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಎಲ್ಲರೂ ಸಮಾನರಾಗಿ ಬದುಕಬೇಕೆಂಬ ಆಶಯದಿಂದ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ಅವರ ಕನಸನ್ನು ನನಸಾಗಿಸಬೇಕು’ ಎಂದರು.

ಯಲ್ಲಮ್ಮ ದೇವಸ್ಥಾನ ಪ್ರಾಂಗಣ, ಎಣ್ಣೆಹೊಂಡ ಬಳೆಗಾರ ಪೇಟೆ ಮತ್ತಿತರ ಕಡೆಗಳಲ್ಲಿ ಸ್ವಚ್ಛಗೊಳಿಸಿ ಕಾರ್ಯಕರ್ತರು ಶ್ರಮದಾನ ಮಾಡಿದರು. ದೇವಸ್ಥಾನದ ಸ್ವಚ್ಛತಾ ಸಿಬ್ಬಂದಿಗಳನ್ನು ಸತ್ಕರಿಸಿದರು.

ಯಮನಪ್ಪ ಮೈತ್ರಿ, ಬಸವರಾಜ ಹನಶಿ, ಮಾರುತಿ ಹರಿಜನ, ಸಂಜು ಹೊಸಮನಿ, ಉಮೇಶ ಹಾದಿಮನಿ, ಬಸವರಾಜ ಕಟ್ಟಿಮನಿ, ವಿರೂಪಾಕ್ಷ ಬೆವಿನಗಿಡದ, ರಾಮು ಕಾಳಪ್ಪನವರ, ರಮೇಶ ಮ್ಯಾಗೇರಿ, ಪರಶುರಾಮ ಬಸಲಿಂಗನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT