<p><strong>ಬೆಳಗಾವಿ:</strong> ‘ಜಗದೀಶ ಶೆಟ್ಟರ್ ಅವರ ತಂದೆ ಮೂರುಸಾವಿರ ಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ’ ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಸಂಸದೆ ಮಂಗಲಾ ಅಂಗಡಿ ಅವರ ನಿವಾಸಕ್ಕೆ ಶನಿವಾರ ಆಗಮಿಸಿ, ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ಜಗದೀಶ ಶೆಟ್ಟರ್ ಕುಟುಂಬಕ್ಕೂ ಮೂರುಸಾವಿರ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಶೆಟ್ಟರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಲು ಬಂದಿದ್ದೇನೆ. ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ’ ಎಂದರು.</p>.<p>ಬೈಲಹೊಂಗಲದ ಮೂರುಸಾವಿರ ಶಾಖಾ ಮಠದ ಸ್ವಾಮೀಜಿ, ಕೊರ್ತಿ ಕೋಲಾರದ ಗಾಣಿಗ ಸಮಾಜದ ಸ್ವಾಮೀಜಿ, ಅರಳಿಕಟ್ಟಿ ವಿರಕ್ತಮಠದ ಸ್ವಾಮೀಜಿ, ಘಟಪ್ರಭಾ ಹೊಸಮಠದ ಶ್ರೀಗಳು, ಬೀದರ್ ವೀರಕ್ತಮಠದ ಸ್ವಾಮೀಜಿ, ತಾರಿಹಾಳ ಅಡಿವೇಶ ಮಠದ ಸ್ವಾಮೀಜಿ, ಗೌಡಗೇರಿ ವಿರಕ್ತ ಮಠದ ಶ್ರೀಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಗದೀಶ ಶೆಟ್ಟರ್ ಅವರ ತಂದೆ ಮೂರುಸಾವಿರ ಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ’ ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಪೀಠಾಧಿಪತಿ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಸಂಸದೆ ಮಂಗಲಾ ಅಂಗಡಿ ಅವರ ನಿವಾಸಕ್ಕೆ ಶನಿವಾರ ಆಗಮಿಸಿ, ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ಜಗದೀಶ ಶೆಟ್ಟರ್ ಕುಟುಂಬಕ್ಕೂ ಮೂರುಸಾವಿರ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಶೆಟ್ಟರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಲು ಬಂದಿದ್ದೇನೆ. ಅವರಿಗೆ ಈ ಚುನಾವಣೆಯಲ್ಲಿ ಒಳ್ಳೆಯದಾಗುತ್ತದೆ’ ಎಂದರು.</p>.<p>ಬೈಲಹೊಂಗಲದ ಮೂರುಸಾವಿರ ಶಾಖಾ ಮಠದ ಸ್ವಾಮೀಜಿ, ಕೊರ್ತಿ ಕೋಲಾರದ ಗಾಣಿಗ ಸಮಾಜದ ಸ್ವಾಮೀಜಿ, ಅರಳಿಕಟ್ಟಿ ವಿರಕ್ತಮಠದ ಸ್ವಾಮೀಜಿ, ಘಟಪ್ರಭಾ ಹೊಸಮಠದ ಶ್ರೀಗಳು, ಬೀದರ್ ವೀರಕ್ತಮಠದ ಸ್ವಾಮೀಜಿ, ತಾರಿಹಾಳ ಅಡಿವೇಶ ಮಠದ ಸ್ವಾಮೀಜಿ, ಗೌಡಗೇರಿ ವಿರಕ್ತ ಮಠದ ಶ್ರೀಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>