ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಮೀಸಲಾತಿಗೆ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಸಮಾಜಕ್ಕೆ ಅವಕಾಶ ಸಿಗಬೇಕೆಂಬ ಆಸೆ ನಮ್ಮದು. ಸ್ವಾಮೀಜಿ ಹಾಗೂ ಅವರ ಸುತ್ತಲಿರುವ ಎಲ್ಲರೂ ಬುದ್ಧಿವಂತರಿದ್ದಾರೆ. ಹೋರಾಟದ ಜೊತೆಗೆ ಸ್ವಾಮೀಜಿಯು ಮುಖ್ಯಮಂತ್ರಿಯೊಂದಿಗೆ ಮಾತುಕತೆಗೂ ಬರಬೇಕು. ಸ್ವಾಮೀಜಿಯವರ ಬೇಡಿಕೆ, ಅದಕ್ಕೆ ಬೇಕಾದ ಪರಿಹಾರದ ಬಗ್ಗೆ ಮುಖ್ಯಮಂತ್ರಿ ಜೊತೆ ಕುಳಿತು ಚರ್ಚಿಸಬಹುದು. ಮುಖ್ಯಮಂತ್ರಿ ತಮ್ಮ ಇತಿಮಿತಿಯಲ್ಲಿ ಬೇಡಿಕೆ ಈಡೇರಿಸಲು ಸಿದ್ಧರಿದ್ದಾರೆ ಎಂದರು.