<p><strong>ಬೆಳಗಾವಿ</strong>: ‘ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಕಚೇರಿಗಳನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿ ನಿರಂತರವಾಗಿ ಚಟುವಟಿಕೆಯಿಂದ ಕೂಡಿರುವಂತೆ ಮಾಡುವ ಜವಾಬ್ದಾರಿ ಎಲ್ಲ ಜನಪ್ರತಿನಿಧಿಗಳ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಮಠಕ್ಕೆ ಮಂಗಳವಾರ ಬಂದಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆ ಸೇರಿದಂತೆ ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಜಿಲ್ಲೆಗೆ ಹೆಸರನ್ನು ಬೆಳಗಿಸಬೇಕು’ ಎಂದರು.</p>.<p>‘ಜಿಲ್ಲೆಗೆ ವಿಶೇಷ ಸ್ಥಾನಮಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡಿವೆ. ನಾವೆಲ್ಲರೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತೇವೆ’ ಎಂದು ಕಡಾಡಿ ಹೇಳಿದರು.</p>.<p>ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಮಾತನಾಡಿದರು. ಮುಖಂಡರಾದ ರಾಜು ಚಿಕ್ಕನಗೌಡರ, ಮಹಾಂತೇಶ ಒಕ್ಕುಂದ, ಸುರೇಶ ಯಾದವ, ಈರಯ್ಯ ಕೋತ್, ಈರಣ್ಣ ಅಂಗಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಕಚೇರಿಗಳನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಿ ನಿರಂತರವಾಗಿ ಚಟುವಟಿಕೆಯಿಂದ ಕೂಡಿರುವಂತೆ ಮಾಡುವ ಜವಾಬ್ದಾರಿ ಎಲ್ಲ ಜನಪ್ರತಿನಿಧಿಗಳ ಮೇಲಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಮಠಕ್ಕೆ ಮಂಗಳವಾರ ಬಂದಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆ ಸೇರಿದಂತೆ ಸಮಗ್ರ ಕರ್ನಾಟಕವನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಜಿಲ್ಲೆಗೆ ಹೆಸರನ್ನು ಬೆಳಗಿಸಬೇಕು’ ಎಂದರು.</p>.<p>‘ಜಿಲ್ಲೆಗೆ ವಿಶೇಷ ಸ್ಥಾನಮಾನವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡಿವೆ. ನಾವೆಲ್ಲರೂ ಹುಮ್ಮಸ್ಸಿನಿಂದ ಕಾರ್ಯನಿರ್ವಹಿಸುತ್ತೇವೆ’ ಎಂದು ಕಡಾಡಿ ಹೇಳಿದರು.</p>.<p>ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರ ಹುಸೇನ್ ಪಠಾಣ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಮಾತನಾಡಿದರು. ಮುಖಂಡರಾದ ರಾಜು ಚಿಕ್ಕನಗೌಡರ, ಮಹಾಂತೇಶ ಒಕ್ಕುಂದ, ಸುರೇಶ ಯಾದವ, ಈರಯ್ಯ ಕೋತ್, ಈರಣ್ಣ ಅಂಗಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>