ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಅಧಿಕಾರ ಯಾರಿಗೂ ಶಾಶ್ವತವಲ್ಲ. ಆದರೆ, ಕೊರೊನಾದಂತಹ ವಿಷಮ ಸಂದರ್ಭದಲ್ಲಿ ಸ್ವಪಕ್ಷೀಯರಿಂದಲೇ ಅಪ್ರಬುದ್ಧ ಬೇಡಿಕೆ ಬಂದಿರುವುದು ಯಾರಿಗೂ ಶೋಭೆ ತರುವಂಥದ್ದಲ್ಲ. ಕೋವಿಡ್ ನಿಯಂತ್ರಣದ ಸವಾಲನ್ನು ಸಮರ್ಥವಾಗಿ ಎದುರಿಸಲು ಎಲ್ಲರೂ ಮೊದಲ ಆದ್ಯತೆ ನೀಡಬೇಕಾಗಿದೆ’ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.