ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ತಲ್ವಾರ್ ಹಿಡಿದು ಸಂಭ್ರಮ: ಪ್ರಕರಣ ದಾಖಲು

Last Updated 18 ಅಕ್ಟೋಬರ್ 2021, 13:42 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ ಪೀರನವಾಡಿ ‌ಕ್ರಾಸ್ ಬಳಿಯ ಬ್ರಹ್ಮನಗರದಲ್ಲಿನ ಹನುಮಾನ ದೇವಸ್ಥಾನದ ಆವರಣದಲ್ಲಿ ತಲ್ವಾರ್‌ಗಳನ್ನು ಪ್ರದರ್ಶಿಸುತ್ತಾ, ಝಳಪಿಸುತ್ತಾ ನೃತ್ಯ ಮಾಡಿದ್ದ ನೂರಕ್ಕೂ ಹೆಚ್ಚು ಮಂದಿಯ ವಿರುದ್ಧ ಉದ್ಯಮಬಾಗ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಯುಧಪೂಜೆ ಅಂಗವಾಗಿ ಬಜರಂಗ ದಳದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಲ್ಲಿ ಬಹುತೇಕರು ರಸ್ತೆಯಲ್ಲೇ ತಲ್ವಾರ್‌ಗಳನ್ನು ಹಿಡಿದು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಸಾರ್ವಜನಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನೆರೆದಿದ್ದವರು ತಲ್ವಾರ್‌ಗಳನ್ನು ಹಿಡಿದು ಸಂಭ್ರಮಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT