ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ ಪೀರನವಾಡಿ ಕ್ರಾಸ್ ಬಳಿಯ ಬ್ರಹ್ಮನಗರದಲ್ಲಿನ ಹನುಮಾನ ದೇವಸ್ಥಾನದ ಆವರಣದಲ್ಲಿ ತಲ್ವಾರ್ಗಳನ್ನು ಪ್ರದರ್ಶಿಸುತ್ತಾ, ಝಳಪಿಸುತ್ತಾ ನೃತ್ಯ ಮಾಡಿದ್ದ ನೂರಕ್ಕೂ ಹೆಚ್ಚು ಮಂದಿಯ ವಿರುದ್ಧ ಉದ್ಯಮಬಾಗ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಯುಧಪೂಜೆ ಅಂಗವಾಗಿ ಬಜರಂಗ ದಳದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಲ್ಲಿ ಬಹುತೇಕರು ರಸ್ತೆಯಲ್ಲೇ ತಲ್ವಾರ್ಗಳನ್ನು ಹಿಡಿದು ಸಂಭ್ರಮದಲ್ಲಿ ಭಾಗಿಯಾಗಿದ್ದರು. ಸಾರ್ವಜನಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡಿದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೆರೆದಿದ್ದವರು ತಲ್ವಾರ್ಗಳನ್ನು ಹಿಡಿದು ಸಂಭ್ರಮಿಸುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.