ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ ಸೃಷ್ಟಿಸಿರುವ ತಲ್ಲಣದಿಂದಾಗಿ ಸಾವಿರಾರು ಎಂಎನ್ಸಿಗಳು ಚೀನಾದಿಂದ ಹೊರಬಂದು ಬೇರೆ ಬೇರೆ ದೇಶಗಳಲ್ಲಿ ಹೂಡಿಕೆಗೆ ಮುಂದಾಗಿವೆ. ಕೈಗಾರಿಕೆಯಲ್ಲಿ ಯಾವಾಗಲೂ ಮುಂದಿರುವ ಕರ್ನಾಟಕ ಈ ಪರಿಸ್ಥಿತಿಯ ಲಾಭ ಪಡೆಯಲು ಅವಕಾಶವಿದೆ. ಹೀಗಾಗಿ, ಇಲಾಖೆಯಿಂದ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಿದ್ದೇನೆ. ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಬೇಕು. ಅದರಲ್ಲಿ ನಮ್ಮ ಅಧಿಕಾರಿಗಳು ಹಾಗೂ ಬೇರೆ ಬೇರೆ ದೇಶದ ಅಧಿಕೃತ ರಾಯಭಾರಿಗಳನ್ನು ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದು ಕೋರಿದ್ದೇನೆ. ಹೂಡಿಕೆದಾರರನ್ನು ಆಕರ್ಷಿಸಲು ಪ್ರಕ್ರಿಯೆ ಆರಂಭಿಸಿದ್ದೇವೆ’ ಎಂದರು.