<p><strong>ಹುಕ್ಕೇರಿ:</strong> ‘ಅಜ್ಞಾನದಿಂದ ಜ್ಞಾನದೆಡೆಗೆ ಕರೆದೊಯ್ಯುವವರೇ ಶಿಕ್ಷಕರು. ಶಿಕ್ಷಕರು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಿ ದೇಶ ಕಟ್ಟುವ ಕಾರ್ಯ ಮಾಡುವುದು ಪವಿತ್ರವಾದ ಕೆಲಸ’ ಎಂದು ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಿಡಕಲ್ ಡ್ಯಾಂನ ಶಿವಾಲಯ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಹಿರಿಯ ಸಾಹಿತಿ ಎಸ್.ಎಂ.ಶಿರೂರ ಅವರ ಅಭಿನಂದನಾ ಸಮಾರಂಭ ಹಾಗೂ ಶಿವಪ್ರಭೆ ಗ್ರಂಥ ಲೋಕಾರ್ಪಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಸಮಾರಂಭ ಉದ್ಘಾಟಿಸಿದ ಮಾಜಿ ಸಚಿವ ಎ.ಬಿ.ಪಾಟೀಲ, ‘ಸಾಹಿತಿ ಎಸ್.ಎಂ.ಶಿರೂರ ಅವರ ಸಾಹಿತ್ಯ ಯುವ ಸಾಹಿತಿಗಳಿಗೆ ಮಾದರಿ ಆಗಲಿ’ ಎಂದರು. ಹಿರಿಯ ಸಹಕಾರಿ ಬಸವರಾಜ ಮಟಗಾರ ಅಧ್ಯಕ್ಷತೆ ವಹಿಸಿದ್ದರು.</p>.<p>ಹಿರಿಯ ಸಾಹಿತಿ ಎಲ್.ಎಸ್.ಶಾಸ್ತ್ರಿ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕ ರಾಜಶೇಖರ ಇಚ್ಚಂಗಿ ಗ್ರಂಥ ಪರಿಚಯಿಸಿದರು. ಸಾಹಿತಿ ಬಸವರಾಜ ಗಾರ್ಗಿ ಅಭಿನಂದನಾ ನುಡಿ ಆಡಿದರು.</p>.<p>ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಪಾಶ್ಚಾಪೂರದ ವಿಶ್ವಾರಾಧ್ಯ ಸ್ವಾಮೀಜಿ, ಘೋಡಗೇರಿ ಕಾಶಿನಾಥ ಸ್ವಾಮೀಜಿ, ಹತ್ತರಗಿ ಕಾರೀಮಠದ ಗುರುಸಿದ್ದ ಸ್ವಾಮೀಜಿ, ಉಳ್ಳಾಗಡ್ಡಿ-ಖಾನಾಪೂರದ ಸಿದ್ದೇಶ್ವರ ಸ್ವಾಮೀಜಿ, ಯಮಕನಮರಡಿ ಹುಣಸಿಕೊಳ್ಳಮಠದ ಸಿದ್ದಬಸವ ದೇವರು, ಸಾಹಿತಿ ಎಲ್.ವಿ. ಪಾಟೀಲ, ಪ್ರಕಾಶ ಅವಲಕ್ಕಿ, ಪ್ರಕಾಶ ಹೊಸಮನಿ, ಮಹಾವೀರ ನಿಲಜಗಿ, ಆರ್. ಕರುಣಾಶೆಟ್ಟಿ, ಮುಖ್ಯ ಶಿಕ್ಷಕ ಬಿ.ಆರ್. ಸರನೋಬತ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ:</strong> ‘ಅಜ್ಞಾನದಿಂದ ಜ್ಞಾನದೆಡೆಗೆ ಕರೆದೊಯ್ಯುವವರೇ ಶಿಕ್ಷಕರು. ಶಿಕ್ಷಕರು ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸಿ ದೇಶ ಕಟ್ಟುವ ಕಾರ್ಯ ಮಾಡುವುದು ಪವಿತ್ರವಾದ ಕೆಲಸ’ ಎಂದು ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಹಿಡಕಲ್ ಡ್ಯಾಂನ ಶಿವಾಲಯ ಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಹಿರಿಯ ಸಾಹಿತಿ ಎಸ್.ಎಂ.ಶಿರೂರ ಅವರ ಅಭಿನಂದನಾ ಸಮಾರಂಭ ಹಾಗೂ ಶಿವಪ್ರಭೆ ಗ್ರಂಥ ಲೋಕಾರ್ಪಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಸಮಾರಂಭ ಉದ್ಘಾಟಿಸಿದ ಮಾಜಿ ಸಚಿವ ಎ.ಬಿ.ಪಾಟೀಲ, ‘ಸಾಹಿತಿ ಎಸ್.ಎಂ.ಶಿರೂರ ಅವರ ಸಾಹಿತ್ಯ ಯುವ ಸಾಹಿತಿಗಳಿಗೆ ಮಾದರಿ ಆಗಲಿ’ ಎಂದರು. ಹಿರಿಯ ಸಹಕಾರಿ ಬಸವರಾಜ ಮಟಗಾರ ಅಧ್ಯಕ್ಷತೆ ವಹಿಸಿದ್ದರು.</p>.<p>ಹಿರಿಯ ಸಾಹಿತಿ ಎಲ್.ಎಸ್.ಶಾಸ್ತ್ರಿ ಗ್ರಂಥ ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಿವೃತ್ತ ಪ್ರಾಧ್ಯಾಪಕ ರಾಜಶೇಖರ ಇಚ್ಚಂಗಿ ಗ್ರಂಥ ಪರಿಚಯಿಸಿದರು. ಸಾಹಿತಿ ಬಸವರಾಜ ಗಾರ್ಗಿ ಅಭಿನಂದನಾ ನುಡಿ ಆಡಿದರು.</p>.<p>ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಪಾಶ್ಚಾಪೂರದ ವಿಶ್ವಾರಾಧ್ಯ ಸ್ವಾಮೀಜಿ, ಘೋಡಗೇರಿ ಕಾಶಿನಾಥ ಸ್ವಾಮೀಜಿ, ಹತ್ತರಗಿ ಕಾರೀಮಠದ ಗುರುಸಿದ್ದ ಸ್ವಾಮೀಜಿ, ಉಳ್ಳಾಗಡ್ಡಿ-ಖಾನಾಪೂರದ ಸಿದ್ದೇಶ್ವರ ಸ್ವಾಮೀಜಿ, ಯಮಕನಮರಡಿ ಹುಣಸಿಕೊಳ್ಳಮಠದ ಸಿದ್ದಬಸವ ದೇವರು, ಸಾಹಿತಿ ಎಲ್.ವಿ. ಪಾಟೀಲ, ಪ್ರಕಾಶ ಅವಲಕ್ಕಿ, ಪ್ರಕಾಶ ಹೊಸಮನಿ, ಮಹಾವೀರ ನಿಲಜಗಿ, ಆರ್. ಕರುಣಾಶೆಟ್ಟಿ, ಮುಖ್ಯ ಶಿಕ್ಷಕ ಬಿ.ಆರ್. ಸರನೋಬತ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>