‘ತರಗತಿ ನಡೆಸಲು ಸರ್ಕಾರ ಅನುಮತಿ ನೀಡಿಲ್ಲ. ಆದರೂ ಆ ಶಿಕ್ಷಕರು ಮನೆಯಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಹಣದಾಸೆಗೆ ತರಗತಿ ತೆಗೆದುಕೊಳ್ಳುತ್ತಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ತರಗತಿ ಮಾಡುತ್ತಿರುವುದು ಸಾಬೀತಾಗಿದೆ. ಹೀಗಾಗಿ, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು– 2021 ಪ್ರಕಾರ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.