ಬೆಳಗಾವಿ: ‘ಕೆಎಲ್ಇ ಸಂಸ್ಥೆ ಸ್ಥಾಪಿಸಿದ ಸಪ್ತರ್ಷಿಗಳ ಕಾರ್ಯ, ಆದರ್ಶ ಗುಣಗಳು ಇಂದಿನ ಶಿಕ್ಷಕರಿಗೆ ಮಾದರಿಯಾಗಿವೆ’ ಎಂದು ಉಪಪ್ರಾಚಾರ್ಯ ಎಸ್.ಆರ್. ಗದಗ ಹೇಳಿದರು.
ಇಲ್ಲಿನ ಕೆಎಲ್ಇ ಸಂಸ್ಥೆಯ ಜಿ.ಎ. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಆರ್.ಎಂ. ಮಗದುಮ್ಮ ಮಾತನಾಡಿದರು. ಪ್ರಾಚಾರ್ಯ ರವೀಂದ್ರ ಪಾಟೀಲ, ಕೆಎಲ್ಇ ಆಡಳಿತ ಮಂಡಳಿ ಸದಸ್ಯ ಮಹಾದೇವ ಬಳಿಗಾರ ಇದ್ದರು.
ಎಂ.ಎಸ್. ಮಗದುಮ್ಮ ಸ್ವಾಗತಿಸಿದರು. ಕೆ.ಆರ್. ಪಟ್ಟಣ ವಂದಿಸಿದರು.