ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಆರ್. ರಾಮಚಂದ್ರಗೌಡ ಮಾತನಾಡಿ, ‘ಉನ್ನತ ಚಾರಿತ್ರ್ಯ ನಿರ್ಮಾಣವೇ ಶಿಕ್ಷಣದ ಮೂಲ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಗುರುಗಳ ಪಾತ್ರ ಹಿರಿದಾಗಿದೆ. ಅತ್ಯಂತ ಶ್ರೇಷ್ಠವಾದ ಸೇವೆ ಎಂದರೆ ಶಿಕ್ಷಕರದು. ಹೀಗಾಗಿ, ಸಮಾಜ ನಿರ್ಮಾಣದಲ್ಲಿ ಗುರುಗಳ ಪಾತ್ರ ಹೆಚ್ಚು ಮಹತ್ವಪೂರ್ಣವಾಗಿದೆ’ ಎಂದು ತಿಳಿಸಿದರು.