ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಹಣಮಂತ ನಿರಾಣಿ ಭರವಸೆ

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ
Published 13 ಫೆಬ್ರುವರಿ 2024, 5:08 IST
Last Updated 13 ಫೆಬ್ರುವರಿ 2024, 5:08 IST
ಅಕ್ಷರ ಗಾತ್ರ

ಬೆಳಗಾವಿ: ‘ಹಳೆ ಪಿಂಚಣಿ ಅನುಷ್ಠಾನ, ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆ ಭರ್ತಿ, ಬಡ್ತಿಯಲ್ಲಾದ ದೋಷ ಸರಿಪಡಿಸುವುದು ಸೇರಿದಂತೆ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು.

ನಗರದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಘಟಕದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳು ಬಾಕಿ ಇವೆ. ಹಂತಹಂತವಾಗಿ ಎಲ್ಲವನ್ನೂ ಬಗೆಹರಿಸಲಾಗುವುದು’ ಎಂದರು.

ಶಾಸಕ ಆಸಿಫ್‌ ಶೇಠ್‌, ‘ಶಾಲೆಗಳ ಮೂಲ ಸೌಕರ್ಯ ಸರಿಪಡಿಸುವುದರ ಜೊತೆಗೆ ಬದಲಾಗುತ್ತಿರುವ ಪದ್ಧತಿಗೆ ಅನುಗುಣವಾಗಿ ಆಧುನಿಕ ಸ್ಪರ್ಶ ನೀಡಲು ಶ್ರಮಿಸುತ್ತಿದ್ದೇನೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ಪಾಟೀಲ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ ಮಾತನಾಡಿದರು.

ಡಿಡಿಪಿಐ ಮೋಹನಕುಮಾರ ಹಂಚಾಟಿ, ಕ್ಷೇತ್ರಶಿಕ್ಷಣಾಧಿಕಾರಿಗಳಾದ ಎಸ್.ಪಿ. ದಾಸಪ್ಪನವರ, ಮೋಹನ ದಂಡಿನ, ಸಂಘದ ಸಂಘಟನಾ ಕಾರ್ಯದರ್ಶಿ ತುಕಾರಾಂ ಬಾಗೆನ್ನವರ, ಉಪಾಧ್ಯಕ್ಷ ಶಿವಾನಂದ ಮಳಗಲಿ, ಎಂ.ಎಸ್. ತಲ್ಲೂರ, ಎಲ್.ಎಸ್. ಬಹದ್ದೂರಿ, ಬಿ.ಎಸ್. ಗಾಣಿಗೇರ, ಬಿಆರ್‌ಸಿ ಎಂ.ಎಸ್. ಮೇದಾರ, ಪರಶುರಾಮ ಪಾಂಡವ ಹಾಗೂ ವಿವಿಧ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅಶೋಕ ಖೋತ ಸ್ವಾಗತಿಸಿದರು. ಸುಮಿತ್ರಾ ಕರವಿನಕೊಪ್ಪ ನಿರೂಪಿಸಿದರು. ಶಿವಾನಂದ ತಲ್ಲೂರ ನಿರ್ವಹಿಸಿದರು. ವೀರೇಶ ಗಣಾಚಾರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT