<p><strong>ಬೆಳಗಾವಿ:</strong> ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯ ಪರಿಣಾಮಕಾರಿ ಅನುಷ್ಠಾನವು ಬೋಧಕರನ್ನು ಅವಲಂಬಿಸಿದೆ’ ಎಂದು ಚೆನ್ನೈನ ರಾಮಕೃಷ್ಣ ಮಠದ ಮಹಾಮೇಧಾನಂದ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕೆಎಲ್ಎಸ್ ಜಿಐಟಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಹಾಗೂ ಎನ್ಇಪಿಯಲ್ಲಿ ಶಿಕ್ಷಕರ ಪಾತ್ರ’ ವಿಷಯ ಕುರಿತು ಅವರು ಮಾತನಾಡಿದರು.</p>.<p>‘ಪ್ರತಿ ಯೋಚನೆ ಹಾಗೂ ಕ್ರಿಯೆಯು ಮನಸ್ಸಿನಲ್ಲಿ ಉಳಿಯುತ್ತದೆ. ಪ್ರತಿ ಕ್ಷಣವೂ ನಾವು ಇತಿಹಾಸ ಸೃಷ್ಟಿಸುತ್ತಿರುತ್ತೇವೆ. ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜ್ಞಾನವಷ್ಟೇ ಮುಖ್ಯವಲ್ಲ. ಒಳ್ಳೆಯ ಉದ್ಯೋಗ ಹಾಗೂ ವೇತನದ ಪ್ಯಾಕೇಜ್ ಪಡೆಯುವುದು ಯಶಸ್ಸಿನ ಸೂತ್ರವಲ್ಲ. ಉತ್ತಮ ನಾಗರಿಕರಾಗಲು ಒಳ್ಳೆಯ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಹುಶಿಸ್ತೀಯ ಜ್ಞಾನ ಒದಗಿಸುವಲ್ಲಿ ಎನ್ಇಪಿ ಸಹಕಾರಿಯಾಗಿದೆ. ಇದನ್ನು ತಿಳಿಸಿಕೊಡುವಲ್ಲಿ ಬೋಧಕರ ಪಾತ್ರ ಪ್ರಮುಖವಾಗಿದೆ’ ಎಂದು ತಿಳಿಸಿದರು.</p>.<p>‘ಶಿಕ್ಷಕರು ಬೋಧನೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಹಾಗೂ ವಿದ್ಯಾರ್ಥಿಗಳನ್ನು ಹಿಡಿದಿಟ್ಟುಕೊಳ್ಳುವುದು ಮಹತ್ವದ್ದಾಗುತ್ತದೆ. ಇದೊಂದು ವೃತ್ತಿ ಎಂದು ಭಾವಿಸದೆ ಸೇವೆ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ದೇಶವನ್ನು ಉತ್ತಮವಾಗಿ ನಿರ್ಮಿಸಬಹುದು’ ಎಂದರು.</p>.<p>ಆಡಳಿತ ಮಂಡಳಿ ಸದಸ್ಯರು, ಬೋಧಕ– ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<p>ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಸ್ವಾಗತಿಸಿದರು. ಪ್ರೊ.ಪೂರ್ವಾ ಅಧ್ಯಾಪಕ ಪರಿಚಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯ ಪರಿಣಾಮಕಾರಿ ಅನುಷ್ಠಾನವು ಬೋಧಕರನ್ನು ಅವಲಂಬಿಸಿದೆ’ ಎಂದು ಚೆನ್ನೈನ ರಾಮಕೃಷ್ಣ ಮಠದ ಮಹಾಮೇಧಾನಂದ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕೆಎಲ್ಎಸ್ ಜಿಐಟಿಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಹಾಗೂ ಎನ್ಇಪಿಯಲ್ಲಿ ಶಿಕ್ಷಕರ ಪಾತ್ರ’ ವಿಷಯ ಕುರಿತು ಅವರು ಮಾತನಾಡಿದರು.</p>.<p>‘ಪ್ರತಿ ಯೋಚನೆ ಹಾಗೂ ಕ್ರಿಯೆಯು ಮನಸ್ಸಿನಲ್ಲಿ ಉಳಿಯುತ್ತದೆ. ಪ್ರತಿ ಕ್ಷಣವೂ ನಾವು ಇತಿಹಾಸ ಸೃಷ್ಟಿಸುತ್ತಿರುತ್ತೇವೆ. ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಜ್ಞಾನವಷ್ಟೇ ಮುಖ್ಯವಲ್ಲ. ಒಳ್ಳೆಯ ಉದ್ಯೋಗ ಹಾಗೂ ವೇತನದ ಪ್ಯಾಕೇಜ್ ಪಡೆಯುವುದು ಯಶಸ್ಸಿನ ಸೂತ್ರವಲ್ಲ. ಉತ್ತಮ ನಾಗರಿಕರಾಗಲು ಒಳ್ಳೆಯ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಹುಶಿಸ್ತೀಯ ಜ್ಞಾನ ಒದಗಿಸುವಲ್ಲಿ ಎನ್ಇಪಿ ಸಹಕಾರಿಯಾಗಿದೆ. ಇದನ್ನು ತಿಳಿಸಿಕೊಡುವಲ್ಲಿ ಬೋಧಕರ ಪಾತ್ರ ಪ್ರಮುಖವಾಗಿದೆ’ ಎಂದು ತಿಳಿಸಿದರು.</p>.<p>‘ಶಿಕ್ಷಕರು ಬೋಧನೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು ಹಾಗೂ ವಿದ್ಯಾರ್ಥಿಗಳನ್ನು ಹಿಡಿದಿಟ್ಟುಕೊಳ್ಳುವುದು ಮಹತ್ವದ್ದಾಗುತ್ತದೆ. ಇದೊಂದು ವೃತ್ತಿ ಎಂದು ಭಾವಿಸದೆ ಸೇವೆ ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ದೇಶವನ್ನು ಉತ್ತಮವಾಗಿ ನಿರ್ಮಿಸಬಹುದು’ ಎಂದರು.</p>.<p>ಆಡಳಿತ ಮಂಡಳಿ ಸದಸ್ಯರು, ಬೋಧಕ– ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.</p>.<p>ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಸ್ವಾಗತಿಸಿದರು. ಪ್ರೊ.ಪೂರ್ವಾ ಅಧ್ಯಾಪಕ ಪರಿಚಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>