‘ಹೊಲ–ಗದ್ದೆಗಳಿಗೆ ತೆರಳಲು ಈ ರಸ್ತೆ ಬಿಟ್ಟರೆ ಪರ್ಯಾಯ ಮಾರ್ಗವಿಲ್ಲ. ಮಳೆ ಸುರಿದರೆ ಸಾಕು ಈ ರಸ್ತೆಯಲ್ಲಿ ವಾಹನಗಳ ಓಡಾಟ ಅಸಾಧ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕೆಸರು ಗದ್ದೆಯಂತಾಗುತ್ತದೆ. ಕೃಷಿ ಕೆಲಸಕ್ಕೆ ತೆರಳುವ ರೈತರು ಹೈರಾಣಾಗುತ್ತಿದ್ದಾರೆ. ಪ್ರತಿ ಮಳೆಗಾಲದಲ್ಲೂ ತೊಂದರೆ ತಪ್ಪಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದ್ದರೂ ಸ್ಪಂದನೆ ದೊರೆತಿಲ್ಲ’ ಎಂದು ಗ್ರಾಮಸ್ಥರು ದೂರಿದ್ದಾರೆ.