<p><strong>ಶಿರಸಂಗಿ</strong>: ‘ಸವದತ್ತಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಕಾಳಿಕಾದೇವಿ ದೇವಸ್ಥಾನದ ಆಸ್ತಿ ಕಬಳಿಸುವ ಹುನ್ನಾರದಿಂದ ವಾಮಾಚಾರ ಮಾಡಲಾಗುತ್ತಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಜಮೀನಿನಲ್ಲಿ ಮಾಟ– ಮಂತ್ರದ ವಸ್ತುಗಳು ಪತ್ತೆಯಾಗಿವೆ. ಜನರೇ ಇದನ್ನು ಪತ್ತೆ ಮಾಡಿದ್ದು, ದೇವಸ್ಥಾನದ ಕಚೇರಿ ಮುಂದೆ ತಂದಿಟ್ಟಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘12 ಎಕರೆ 13 ಗುಂಟೆ ಜಮೀನು ದೇವಸ್ಥಾನದ ಪಕ್ಕದಲ್ಲಿದೆ. ಇದು ದೇವಸ್ಥಾನಕ್ಕೆ ಸಂಬಂಧಿಸಿದ ಆಸ್ತಿ. ಕೆಲವರು ಗುಂಪು ಕಟ್ಟಿಕೊಂಡು ಸಂಸ್ಥೆಯೊಂದನ್ನು ಹುಟ್ಟುಹಾಕಿ, ಅದರ ಮೂಲಕ ಈ ಜಮೀನು ಪಡೆಯಲು ಯತ್ನಿಸುತ್ತಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀನನ್ನು ತಮ್ಮ ಸಂಸ್ಥೆ ಹೆಸರಿಗೆ ಮಾಡಿಕೊಂಡಿದ್ದಾರೆ. ಭಕ್ತರ ದೇಣಿಗೆಯನ್ನೂ ಸಂಗ್ರಹಿಸುತ್ತಿದ್ದಾರೆ. ಇದೆಲ್ಲವೂ ಭಕ್ತರಿಗೆ ಗೊತ್ತಾಗಿದ್ದರಿಂದ, ಹೆದರಿಸಿ ಆಸ್ತಿ ಕಬಳಿಸಲು ವಾಮಾಚಾರದಂಥ ಮೌಢ್ಯದ ದಾರಿ ಹಿಡಿದಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಮಣ್ಣೆತ್ತಿನ ಅಮಾವಾಸ್ಯೆಯ ರಾತ್ರಿಯಂದು ಗ್ರಾಮದ ಕೆಲವು ಪ್ರಮುಖರ ಹೆಸರುಗಳನ್ನು ಚೀಟಿಯಲ್ಲಿ ಬರೆದು, ಒಂದು ಕುಡಿಕೆ, ಸೂಜಿ–ದಾರ, ಲಿಂಬೆಹಣ್ಣು, ಕರಿ ಗೊಂಬೆ ಮುಂತಾದ ವಸ್ತುಗಳನ್ನು ಇಟ್ಟು, ಕರಿ ಬಟ್ಟೆಯಲ್ಲಿ ಕಟ್ಟಿ ಜಮೀನಿನಲ್ಲಿ ನಾಲ್ಕು ದಿಕ್ಕುಗಳಲ್ಲಿ ಹೂಳಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>‘ಈ ವಿಷಯ ಗೊತ್ತಾಗಿ ಗ್ರಾಮಸ್ಥರೇ ಸೇರಿಕೊಂಡು ವಾಮಾಚಾರದ ವಸ್ತುಗಳನ್ನು ತೆಗೆದು, ಕಚೇರಿಯ ಮುಂದೆ ತಂದು ಇಟ್ಟಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಂಗಿ</strong>: ‘ಸವದತ್ತಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಕಾಳಿಕಾದೇವಿ ದೇವಸ್ಥಾನದ ಆಸ್ತಿ ಕಬಳಿಸುವ ಹುನ್ನಾರದಿಂದ ವಾಮಾಚಾರ ಮಾಡಲಾಗುತ್ತಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಜಮೀನಿನಲ್ಲಿ ಮಾಟ– ಮಂತ್ರದ ವಸ್ತುಗಳು ಪತ್ತೆಯಾಗಿವೆ. ಜನರೇ ಇದನ್ನು ಪತ್ತೆ ಮಾಡಿದ್ದು, ದೇವಸ್ಥಾನದ ಕಚೇರಿ ಮುಂದೆ ತಂದಿಟ್ಟಿದ್ದಾರೆ’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p>.<p>‘12 ಎಕರೆ 13 ಗುಂಟೆ ಜಮೀನು ದೇವಸ್ಥಾನದ ಪಕ್ಕದಲ್ಲಿದೆ. ಇದು ದೇವಸ್ಥಾನಕ್ಕೆ ಸಂಬಂಧಿಸಿದ ಆಸ್ತಿ. ಕೆಲವರು ಗುಂಪು ಕಟ್ಟಿಕೊಂಡು ಸಂಸ್ಥೆಯೊಂದನ್ನು ಹುಟ್ಟುಹಾಕಿ, ಅದರ ಮೂಲಕ ಈ ಜಮೀನು ಪಡೆಯಲು ಯತ್ನಿಸುತ್ತಿದ್ದಾರೆ. ಮೂರು ವರ್ಷಗಳ ಹಿಂದೆ ಜಮೀನನ್ನು ತಮ್ಮ ಸಂಸ್ಥೆ ಹೆಸರಿಗೆ ಮಾಡಿಕೊಂಡಿದ್ದಾರೆ. ಭಕ್ತರ ದೇಣಿಗೆಯನ್ನೂ ಸಂಗ್ರಹಿಸುತ್ತಿದ್ದಾರೆ. ಇದೆಲ್ಲವೂ ಭಕ್ತರಿಗೆ ಗೊತ್ತಾಗಿದ್ದರಿಂದ, ಹೆದರಿಸಿ ಆಸ್ತಿ ಕಬಳಿಸಲು ವಾಮಾಚಾರದಂಥ ಮೌಢ್ಯದ ದಾರಿ ಹಿಡಿದಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಮಣ್ಣೆತ್ತಿನ ಅಮಾವಾಸ್ಯೆಯ ರಾತ್ರಿಯಂದು ಗ್ರಾಮದ ಕೆಲವು ಪ್ರಮುಖರ ಹೆಸರುಗಳನ್ನು ಚೀಟಿಯಲ್ಲಿ ಬರೆದು, ಒಂದು ಕುಡಿಕೆ, ಸೂಜಿ–ದಾರ, ಲಿಂಬೆಹಣ್ಣು, ಕರಿ ಗೊಂಬೆ ಮುಂತಾದ ವಸ್ತುಗಳನ್ನು ಇಟ್ಟು, ಕರಿ ಬಟ್ಟೆಯಲ್ಲಿ ಕಟ್ಟಿ ಜಮೀನಿನಲ್ಲಿ ನಾಲ್ಕು ದಿಕ್ಕುಗಳಲ್ಲಿ ಹೂಳಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>‘ಈ ವಿಷಯ ಗೊತ್ತಾಗಿ ಗ್ರಾಮಸ್ಥರೇ ಸೇರಿಕೊಂಡು ವಾಮಾಚಾರದ ವಸ್ತುಗಳನ್ನು ತೆಗೆದು, ಕಚೇರಿಯ ಮುಂದೆ ತಂದು ಇಟ್ಟಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸಬೇಕು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>