<p>ತೇರದಾಳ: ಇಲ್ಲಿನ ಗುರುದೇವ ಬ್ರಹ್ಮಾನಂದ ಆಶ್ರಮದ ಬಳಿಯ ಹಾರೂಗೇರಿ ರಸ್ತೆಯ 1ನೇ ಕಾಲುವೆ ಹತ್ತಿರದ ಶಂಕರ ಕುಂಬಾರ ಎಂಬುವವರಿಗೆ ಸೇರಿದ ತೋಟದಲ್ಲಿ ಸಾಕಿದ್ದ 9 ಟಗರು ಮರಿಗಳನ್ನು ಕಳ್ಳತನ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p>ಶಂಕರ ಅವರು ಹಲವು ವರ್ಷಗಳಿಂದ ತಮ್ಮ ತೋಟದಲ್ಲಿ ಆಡು, ಕುರಿ ಸಾಕಾಣಿಕೆ ಮಾಡುತ್ತಿದ್ದು, ಸಾಕಾಣಿಕೆ ಕೇಂದ್ರದ ಸುತ್ತಲೂ ತಂತಿ ಬೇಲಿ, ಮೇಲೆ ತಗಡಿನ ಶೀಟ್ ಆಸರೆ ಹಾಕಿ ಕಾವಲುಗಾರರನ್ನು ನೇಮಿಸಿದ್ದರು.</p>.<p>ಕಳ್ಳರು ತೋಟಕ್ಕೆ ನುಗ್ಗಿ ಟಗರು ಮರಿಗಳನ್ನು ಹೊರಗೆ ತೆಗೆದುಕೊಳ್ಳಲು ಬೇಕಾಗುವಷ್ಟು ಮಾತ್ರ ಜಾಳಿಗೆಯನ್ನು ಕತ್ತರಿಸಿ 9 ಟಗರು ಮರಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಬೆಳಿಗ್ಗೆ ಈ ವಿಷಯ ಕಾವಲುಗಾರನ ಗಮನಕ್ಕೆ ಬಂದಿದೆ.</p>.<p>ಮಾಲೀಕ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-19-1142611533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೇರದಾಳ: ಇಲ್ಲಿನ ಗುರುದೇವ ಬ್ರಹ್ಮಾನಂದ ಆಶ್ರಮದ ಬಳಿಯ ಹಾರೂಗೇರಿ ರಸ್ತೆಯ 1ನೇ ಕಾಲುವೆ ಹತ್ತಿರದ ಶಂಕರ ಕುಂಬಾರ ಎಂಬುವವರಿಗೆ ಸೇರಿದ ತೋಟದಲ್ಲಿ ಸಾಕಿದ್ದ 9 ಟಗರು ಮರಿಗಳನ್ನು ಕಳ್ಳತನ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p>ಶಂಕರ ಅವರು ಹಲವು ವರ್ಷಗಳಿಂದ ತಮ್ಮ ತೋಟದಲ್ಲಿ ಆಡು, ಕುರಿ ಸಾಕಾಣಿಕೆ ಮಾಡುತ್ತಿದ್ದು, ಸಾಕಾಣಿಕೆ ಕೇಂದ್ರದ ಸುತ್ತಲೂ ತಂತಿ ಬೇಲಿ, ಮೇಲೆ ತಗಡಿನ ಶೀಟ್ ಆಸರೆ ಹಾಕಿ ಕಾವಲುಗಾರರನ್ನು ನೇಮಿಸಿದ್ದರು.</p>.<p>ಕಳ್ಳರು ತೋಟಕ್ಕೆ ನುಗ್ಗಿ ಟಗರು ಮರಿಗಳನ್ನು ಹೊರಗೆ ತೆಗೆದುಕೊಳ್ಳಲು ಬೇಕಾಗುವಷ್ಟು ಮಾತ್ರ ಜಾಳಿಗೆಯನ್ನು ಕತ್ತರಿಸಿ 9 ಟಗರು ಮರಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಬೆಳಿಗ್ಗೆ ಈ ವಿಷಯ ಕಾವಲುಗಾರನ ಗಮನಕ್ಕೆ ಬಂದಿದೆ.</p>.<p>ಮಾಲೀಕ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-19-1142611533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>