<p><strong>ಬೆಳಗಾವಿ: </strong>‘ಕೋವಿಡ್–19 ಮೂರನೇ ಅಲೆ ಬರಬಹುದೆಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ, ಸೋಂಕಿನ ಪ್ರಕರಣಗಳು ಹೆಚ್ಚಿರುವ ನೆರೆಯ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.</p>.<p>‘ಕೋವಿಡ್ ನಿವಾರಣೆ ದೃಷ್ಟಿಯಿಂದಾಗಿ, ಮಹಾರಾಷ್ಟ್ರದಿಂದ ಜಿಲ್ಲೆಯ ಎಲ್ಲ ಗಡಿಗಳ ಮೂಲಕ ಬರುವವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯ ಅತ್ಯಂತ ಕಟ್ಟುನಿಟ್ಟಾಗಿ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಆರೋಗ್ಯ, ಕಂದಾಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದ್ದಾರೆ.</p>.<p>‘ಕರ್ತವ್ಯಲೋಪ ಎಸಗುವಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ತಿಳಿಸಿದ್ದಾರೆ.</p>.<p>ಈ ಸೂಚನೆಗಳನ್ನು ಪ್ರಾದೇಶಿಕ ಆಯುಕ್ತರು, ಉತ್ತರ ವಲಯ ಐಜಿಪಿ ಹಾಗೂ ಎಸ್ಪಿಗೂ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕೋವಿಡ್–19 ಮೂರನೇ ಅಲೆ ಬರಬಹುದೆಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ, ಸೋಂಕಿನ ಪ್ರಕರಣಗಳು ಹೆಚ್ಚಿರುವ ನೆರೆಯ ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.</p>.<p>‘ಕೋವಿಡ್ ನಿವಾರಣೆ ದೃಷ್ಟಿಯಿಂದಾಗಿ, ಮಹಾರಾಷ್ಟ್ರದಿಂದ ಜಿಲ್ಲೆಯ ಎಲ್ಲ ಗಡಿಗಳ ಮೂಲಕ ಬರುವವರನ್ನು ಪರೀಕ್ಷೆಗೆ ಒಳಪಡಿಸುವ ಕಾರ್ಯ ಅತ್ಯಂತ ಕಟ್ಟುನಿಟ್ಟಾಗಿ ನಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಆರೋಗ್ಯ, ಕಂದಾಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆಗಳು ಹೆಚ್ಚಿನ ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿಯನ್ನು ನಿಭಾಯಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ತಾಕೀತು ಮಾಡಿದ್ದಾರೆ.</p>.<p>‘ಕರ್ತವ್ಯಲೋಪ ಎಸಗುವಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು’ ಎಂದು ತಿಳಿಸಿದ್ದಾರೆ.</p>.<p>ಈ ಸೂಚನೆಗಳನ್ನು ಪ್ರಾದೇಶಿಕ ಆಯುಕ್ತರು, ಉತ್ತರ ವಲಯ ಐಜಿಪಿ ಹಾಗೂ ಎಸ್ಪಿಗೂ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>