<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸುಗಮವಾಗಿ ನಡೆಯಿತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆದವು.</p><p>ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 3,972 ಅಭ್ಯರ್ಥಿಗಳ ಪೈಕಿ 3,545 ಅಭ್ಯರ್ಥಿಗಳು ಹಾಜರಾದರು. 427 ಅಭ್ಯರ್ಥಿಗಳು ಗೈರಾಗಿದ್ದರು. ದ್ವಿತೀಯ ಪರೀಕ್ಷೆಗೆ 6,151 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,677 ಅಭ್ಯರ್ಥಿಗಳು ಹಾಜರಾದರೆ, 474 ಅಭ್ಯರ್ಥಿಗಳು ಗೈರು ಹಾಜರಾದರು.</p><p>ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 3,291 ಅಭ್ಯರ್ಥಿಗಳ ಪೈಕಿ 2,944 ಮಂದಿ ಹಾಜರಾದರೆ, 347 ಅಭ್ಯರ್ಥಿಗಳು ಗೈರಾಗಿದ್ದರು. ದ್ವಿತೀಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,045 ಅಭ್ಯರ್ಥಿಗಳ ಪೈಕಿ 4,692 ಮಂದಿ ಬರೆದರು. 353 ಅಭ್ಯರ್ಥಿಗಳು ಗೈರು ಹಾಜರಾದರು.</p><p>‘ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಯಾವ ಗೊಂದಲವೂ ಇಲ್ಲದೆ ಪರೀಕ್ಷೆ ಸುಗಮವಾಗಿ ನಡೆದಿವೆ’ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸುಗಮವಾಗಿ ನಡೆಯಿತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಗಳಲ್ಲಿ ಪರೀಕ್ಷೆ ನಡೆದವು.</p><p>ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 3,972 ಅಭ್ಯರ್ಥಿಗಳ ಪೈಕಿ 3,545 ಅಭ್ಯರ್ಥಿಗಳು ಹಾಜರಾದರು. 427 ಅಭ್ಯರ್ಥಿಗಳು ಗೈರಾಗಿದ್ದರು. ದ್ವಿತೀಯ ಪರೀಕ್ಷೆಗೆ 6,151 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,677 ಅಭ್ಯರ್ಥಿಗಳು ಹಾಜರಾದರೆ, 474 ಅಭ್ಯರ್ಥಿಗಳು ಗೈರು ಹಾಜರಾದರು.</p><p>ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 3,291 ಅಭ್ಯರ್ಥಿಗಳ ಪೈಕಿ 2,944 ಮಂದಿ ಹಾಜರಾದರೆ, 347 ಅಭ್ಯರ್ಥಿಗಳು ಗೈರಾಗಿದ್ದರು. ದ್ವಿತೀಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,045 ಅಭ್ಯರ್ಥಿಗಳ ಪೈಕಿ 4,692 ಮಂದಿ ಬರೆದರು. 353 ಅಭ್ಯರ್ಥಿಗಳು ಗೈರು ಹಾಜರಾದರು.</p><p>‘ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಯಾವ ಗೊಂದಲವೂ ಇಲ್ಲದೆ ಪರೀಕ್ಷೆ ಸುಗಮವಾಗಿ ನಡೆದಿವೆ’ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>