<p><strong>ಬೆಳಗಾವಿ:</strong> ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ಅವರನ್ನು ಧಾರವಾಡದ ಹೈಕೋರ್ಟ್ ಪೀಠ ನಿರ್ದೋಷಿ ಎಂದು ತೀರ್ಪು ನೀಡಿದೆ.</p>.<p>ದೇಶದಾದ್ಯಂತ ದೊಡ್ಡ ಸದ್ದು ಮಾಡಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ, ಹೈಕೋರ್ಟ್ದ್ವಿಸದಸ್ಯ ಪೀಠವು ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ನೀಡಿ, ಆರೋಪಿಯನ್ನು ಬಿಡುಗಡೆ ಮಾಡಿದೆ.</p>.<p>ರಾಜ್ಯದ ಜನರನ್ನು ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಂತಾಗಿದೆ.</p>.<p>2015ರ ಆಗಸ್ಟ್ 16ರಂದು ನಸುಕಿನ ಜಾವ ಇಲ್ಲಿನ ಕುವೆಂಪುನಗರದ ಮನೆಯಲ್ಲಿ ತ್ರಿವಳಿ ಕೊಲೆ ನಡೆದಿತ್ತು.</p>.<p>ಗೃಹಿಣಿ ರೀನಾ ಮಾಲಗತ್ತಿ, ಅವರ ಮಕ್ಕಳಾದ ಆದಿತ್ಯ ಹಾಗೂ ಸಾಹಿತ್ಯ ಅವರನ್ನು ಬೆಡ್ ರೂಮಿನಲ್ಲೇ ಕೊಲೆ ಮಾಡಲಾಗಿತ್ತು. ರೀನಾ ಅವರೂಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪ್ರವೀಣ್ ಭಟ್ ಈ ಕೊಲೆ ಮಾಡಿದ್ದಾಗಿ, ರೀನಾ ಅವರ ಸಹೋದರ ದೂರು ದಾಖಲಿಸಿದ್ದರು.</p>.<p>ಪೊಲೀಸರು 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್ಗೆಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.</p>.<p>ಆದರೆ, ಈ ಆದೇಶವನ್ನು ತಡೆಹಿಡಿದ ಧಾರವಾಡ ಹೈಕೋರ್ಟ್ಪೀಠವು, ಇದೇ ಜೂನ್ 21ರಂದು ಆರೋಪಿಯನ್ನು ಖುಲಾಸೆ ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠವು ಈ ಮಹತ್ವದ ತೀರ್ಪು ನೀಡಿದೆ.</p>.<p><strong>ಓದಿ...<a href="https://www.prajavani.net/district/belagavi/dharwad-high-court-verdict-about-triple-murder-case-in-belagavi-crime-news-948154.html" target="_blank">ಬೆಳಗಾವಿ:ಬೆಚ್ಚಿ ಬೀಳಿಸಿದ್ದತ್ರಿವಳಿ ಕೊಲೆ, ಆರೋಪಿ ನಿರ್ದೋಷಿಯಾಗಿದ್ದು ಏಕೆ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ಅವರನ್ನು ಧಾರವಾಡದ ಹೈಕೋರ್ಟ್ ಪೀಠ ನಿರ್ದೋಷಿ ಎಂದು ತೀರ್ಪು ನೀಡಿದೆ.</p>.<p>ದೇಶದಾದ್ಯಂತ ದೊಡ್ಡ ಸದ್ದು ಮಾಡಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ, ಹೈಕೋರ್ಟ್ದ್ವಿಸದಸ್ಯ ಪೀಠವು ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ನೀಡಿ, ಆರೋಪಿಯನ್ನು ಬಿಡುಗಡೆ ಮಾಡಿದೆ.</p>.<p>ರಾಜ್ಯದ ಜನರನ್ನು ಬೆಚ್ಚಿಬೀಳಿಸಿದ್ದ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಂತಾಗಿದೆ.</p>.<p>2015ರ ಆಗಸ್ಟ್ 16ರಂದು ನಸುಕಿನ ಜಾವ ಇಲ್ಲಿನ ಕುವೆಂಪುನಗರದ ಮನೆಯಲ್ಲಿ ತ್ರಿವಳಿ ಕೊಲೆ ನಡೆದಿತ್ತು.</p>.<p>ಗೃಹಿಣಿ ರೀನಾ ಮಾಲಗತ್ತಿ, ಅವರ ಮಕ್ಕಳಾದ ಆದಿತ್ಯ ಹಾಗೂ ಸಾಹಿತ್ಯ ಅವರನ್ನು ಬೆಡ್ ರೂಮಿನಲ್ಲೇ ಕೊಲೆ ಮಾಡಲಾಗಿತ್ತು. ರೀನಾ ಅವರೂಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪ್ರವೀಣ್ ಭಟ್ ಈ ಕೊಲೆ ಮಾಡಿದ್ದಾಗಿ, ರೀನಾ ಅವರ ಸಹೋದರ ದೂರು ದಾಖಲಿಸಿದ್ದರು.</p>.<p>ಪೊಲೀಸರು 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್ಗೆಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.</p>.<p>ಆದರೆ, ಈ ಆದೇಶವನ್ನು ತಡೆಹಿಡಿದ ಧಾರವಾಡ ಹೈಕೋರ್ಟ್ಪೀಠವು, ಇದೇ ಜೂನ್ 21ರಂದು ಆರೋಪಿಯನ್ನು ಖುಲಾಸೆ ಮಾಡಿದೆ.</p>.<p>ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಎಂ.ಜಿ.ಎಸ್ ಕಮಲ್ ಅವರಿದ್ದ ಪೀಠವು ಈ ಮಹತ್ವದ ತೀರ್ಪು ನೀಡಿದೆ.</p>.<p><strong>ಓದಿ...<a href="https://www.prajavani.net/district/belagavi/dharwad-high-court-verdict-about-triple-murder-case-in-belagavi-crime-news-948154.html" target="_blank">ಬೆಳಗಾವಿ:ಬೆಚ್ಚಿ ಬೀಳಿಸಿದ್ದತ್ರಿವಳಿ ಕೊಲೆ, ಆರೋಪಿ ನಿರ್ದೋಷಿಯಾಗಿದ್ದು ಏಕೆ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>