<p><strong>ಚಿಕ್ಕೋಡಿ</strong>: ‘ಸತ್ಯ, ಪ್ರೇಮ, ಸೇವೆ, ಸ್ವಾರ್ಥ, ತ್ಯಾಗ ಎಂಬ ಧ್ಯೇಯವಾಕ್ಯದ ಪರಿಕಲ್ಪನೆ ಹೊಂದಿರುವ ಕೆಎಲ್ಇ ಸಂಸ್ಥೆಯು ದೇಶ ವಿದೇಶಗಳಲ್ಲಿ ಹೆಸರು ಪಡೆದುಕೊಂಡಿದೆ. ಸಪ್ತರ್ಷಿಗಳು ಸಂಸ್ಥೆ ನಿರ್ಮಾಣಕ್ಕೆ ಮಾಡಿರುವ ತ್ಯಾಗ ಅವಿಸ್ಮರಣೀಯ’ ಎಂದು ನಿವೃತ್ತ ಪ್ರಾಚಾರ್ಯ ಉದಯಸಿಂಗ್ ರಾಜಪೂತ ಹೇಳಿದರು.</p>.<p>ಪಟ್ಟಣದ ಸಿ.ಬಿ.ಕೋರೆ ಬಹುತಾಂತ್ರಿಕ ವಿದ್ಯಾಲಯ ಹಾಗೂ ಕೆಎಲ್ಇ ಅಂಗಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಡೆದ ಕೆಎಲ್ಇ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೆಎಲ್ಇ ಸಂಸ್ಥೆಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ದರ್ಶನ ಬಿಳ್ಳೂರ ಮಾತನಾಡಿ, ‘ಸಪ್ತರ್ಷಿಗಳು ಅಡಿಪಾಯ ಹಾಕಿದ ಕೆಎಲ್ಇ ಸಂಸ್ಥೆಗೆ ಕಳೆದ 4 ದಶಕಗಳಿಂದ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಶ್ರಮದ ಫಲವಾಗಿ ದೇಶ ವಿದೇಶಗಳಲ್ಲಿ 315 ಸಂಸ್ಥೆಗಳನ್ನು ಹೊಂದಿ ಹೆಮ್ಮರವಾಗಿ ಬೆಳೆದು ನಿಂತಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಅವಿಸ್ಮರಣೀಯ ಸೇವೆ ಸಲ್ಲಿಸಿದ ಕೆಎಲ್ಇ ಸಂಸ್ಥೆಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.</p>.<p>ಪ್ರಾಚಾರ್ಯ ವಿವೇಕ ಖೋತ, ವೆಂಕಟರೆಡ್ಡಿ, ಪ್ರಕಾಶ ಕೋಳಿ, ಸುನೀಲ ಎಂ.ಬಿ, ವರಲಕ್ಷ್ಮಿ, ಡಿ.ಬಿ.ಸೊಲ್ಲಾಪುರೆ, ಅಮರ ಪಶುಮತಿಮಠ, ಸುಧೀಂದ್ರ ಹೊನವಾಡ, ಕಿರಣ ಮುತ್ನಾಳೆ, ವಿಜಯ ಹೂಗಾರ ಎಂ.ಬಿ.ನಾವಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ‘ಸತ್ಯ, ಪ್ರೇಮ, ಸೇವೆ, ಸ್ವಾರ್ಥ, ತ್ಯಾಗ ಎಂಬ ಧ್ಯೇಯವಾಕ್ಯದ ಪರಿಕಲ್ಪನೆ ಹೊಂದಿರುವ ಕೆಎಲ್ಇ ಸಂಸ್ಥೆಯು ದೇಶ ವಿದೇಶಗಳಲ್ಲಿ ಹೆಸರು ಪಡೆದುಕೊಂಡಿದೆ. ಸಪ್ತರ್ಷಿಗಳು ಸಂಸ್ಥೆ ನಿರ್ಮಾಣಕ್ಕೆ ಮಾಡಿರುವ ತ್ಯಾಗ ಅವಿಸ್ಮರಣೀಯ’ ಎಂದು ನಿವೃತ್ತ ಪ್ರಾಚಾರ್ಯ ಉದಯಸಿಂಗ್ ರಾಜಪೂತ ಹೇಳಿದರು.</p>.<p>ಪಟ್ಟಣದ ಸಿ.ಬಿ.ಕೋರೆ ಬಹುತಾಂತ್ರಿಕ ವಿದ್ಯಾಲಯ ಹಾಗೂ ಕೆಎಲ್ಇ ಅಂಗಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಡೆದ ಕೆಎಲ್ಇ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೆಎಲ್ಇ ಸಂಸ್ಥೆಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ದರ್ಶನ ಬಿಳ್ಳೂರ ಮಾತನಾಡಿ, ‘ಸಪ್ತರ್ಷಿಗಳು ಅಡಿಪಾಯ ಹಾಕಿದ ಕೆಎಲ್ಇ ಸಂಸ್ಥೆಗೆ ಕಳೆದ 4 ದಶಕಗಳಿಂದ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಶ್ರಮದ ಫಲವಾಗಿ ದೇಶ ವಿದೇಶಗಳಲ್ಲಿ 315 ಸಂಸ್ಥೆಗಳನ್ನು ಹೊಂದಿ ಹೆಮ್ಮರವಾಗಿ ಬೆಳೆದು ನಿಂತಿದೆ’ ಎಂದರು.</p>.<p>ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ಅವಿಸ್ಮರಣೀಯ ಸೇವೆ ಸಲ್ಲಿಸಿದ ಕೆಎಲ್ಇ ಸಂಸ್ಥೆಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.</p>.<p>ಪ್ರಾಚಾರ್ಯ ವಿವೇಕ ಖೋತ, ವೆಂಕಟರೆಡ್ಡಿ, ಪ್ರಕಾಶ ಕೋಳಿ, ಸುನೀಲ ಎಂ.ಬಿ, ವರಲಕ್ಷ್ಮಿ, ಡಿ.ಬಿ.ಸೊಲ್ಲಾಪುರೆ, ಅಮರ ಪಶುಮತಿಮಠ, ಸುಧೀಂದ್ರ ಹೊನವಾಡ, ಕಿರಣ ಮುತ್ನಾಳೆ, ವಿಜಯ ಹೂಗಾರ ಎಂ.ಬಿ.ನಾವಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>