<p><strong>ಬೆಳಗಾವಿ: ‘</strong>ಇಲ್ಲಿನ ಮಹಾನಗರ ಪಾಲಿಕೆ ವಿವಿಧ ಶಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ. ಇದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು’ ಎಂದು ಸದಸ್ಯರು ಒತ್ತಾಯಿಸಿದರು.</p>.<p>ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ ಕಂದಾಯ ಶಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಏಜೆಂಟರ ಹಾವಳಿ ವಿಚಾರವನ್ನು ಸದಸ್ಯರು ಪ್ರಸ್ತಾಪಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಪಾಲಿಕೆಯಲ್ಲಿ ಯಾವ ಶಾಖೆಗೆ ಹೋದರೂ, ಏಜೆಂಟರ ಹಾವಳಿಯೇ ಕಂಡುಬರುತ್ತಿದೆ. ಹಾಲಿ ಸದಸ್ಯರು, ಅಧಿಕಾರಿಗಳಿಗಿಂತ, ಏಜೆಂಟರ ಕೆಲಸಗಳೇ ಬೇಗ ಆಗುತ್ತಿವೆ. ಕೆಲವೊಮ್ಮೆ ಮಾಜಿ ಸದಸ್ಯರೂ ಮಧ್ಯಪ್ರವೇಶಿಸುತ್ತಿದ್ದಾರೆ. ಇದಕ್ಕೆ ತುರ್ತಾಗಿ ಕಡಿವಾಣ ಬೀಳದಿದ್ದರೆ ಗಂಭೀರ ಪರಿಣಾಮ ಎದುರಿಸುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p>.<p>‘ಇ–ಆಸ್ತಿ ದಾಖಲೀಕರಣ ಪ್ರಕ್ರಿಯೆ ವಿಳಂಬವಾಗುತ್ತಿದೆ. ಯಾವುದೇ ಕಡತ ಬೇಗ ವಿಲೇವಾರಿಯಾಗುತ್ತಿಲ್ಲ’ ಎಂದು ದೂರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಮಂಗೇಶ ಪವಾರ, ‘ಇ–ಆಸ್ತಿ ದಾಖಲೀಕರಣ ಪ್ರಕ್ರಿಯೆ ಯಾವ ಕಾರಣಕ್ಕೂ ವಿಳಂಬವಾಗಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಬ್ಬಂದಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು. </p>.<p>‘ಇ–ಆಸ್ತಿ ದಾಖಲೀಕರಣ ವೇಳೆ, ಸಾಕಷ್ಟು ತಪ್ಪಾಗುತ್ತಿವೆ. ಇದನ್ನು ಸರಿಪಡಿಸಲು ಅಲೆದಾಡಿಸುತ್ತಿದ್ದಾರೆ ಎಂದು ಜನರು ದೂರಿದ್ದಾರೆ. ಮುಂದೆ ಇಂಥ ತಪ್ಪುಗಳಾಗಬಾರದು. ತಪ್ಪೆಸಗಿದ ಸಿಬ್ಬಂದಿಗೆ ದಂಡ ವಿಧಿಸಬೇಕು. ಪಾಲಿಕೆಗೆ ಬರಬೇಕಿರುವ ಆಸ್ತಿಯನ್ನು ಸಕಾಲಕ್ಕೆ ವಸೂಲಿ ಮಾಡಬೇಕು’ ಎಂದು ತಿಳಿಸಿದರು.</p>.<p>ಆಯುಕ್ತೆ ಬಿ.ಶುಭ, ‘ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು. ಇ–ಆಸ್ತಿ ದಾಖಲೀಕರಣ ಪ್ರಕ್ರಿಯೆ ವಿಳಂಬವಾಗದಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ, ವಿರೋಧ ಪಕ್ಷದ ನಾಯಕ ಮುಜಮ್ಮಿಲ್ ಡೋಣಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ಇಲ್ಲಿನ ಮಹಾನಗರ ಪಾಲಿಕೆ ವಿವಿಧ ಶಾಖೆಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿಮೀರಿದೆ. ಇದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು’ ಎಂದು ಸದಸ್ಯರು ಒತ್ತಾಯಿಸಿದರು.</p>.<p>ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸೋಮವಾರ ನಡೆದ ಕಂದಾಯ ಶಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಏಜೆಂಟರ ಹಾವಳಿ ವಿಚಾರವನ್ನು ಸದಸ್ಯರು ಪ್ರಸ್ತಾಪಿಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>‘ಪಾಲಿಕೆಯಲ್ಲಿ ಯಾವ ಶಾಖೆಗೆ ಹೋದರೂ, ಏಜೆಂಟರ ಹಾವಳಿಯೇ ಕಂಡುಬರುತ್ತಿದೆ. ಹಾಲಿ ಸದಸ್ಯರು, ಅಧಿಕಾರಿಗಳಿಗಿಂತ, ಏಜೆಂಟರ ಕೆಲಸಗಳೇ ಬೇಗ ಆಗುತ್ತಿವೆ. ಕೆಲವೊಮ್ಮೆ ಮಾಜಿ ಸದಸ್ಯರೂ ಮಧ್ಯಪ್ರವೇಶಿಸುತ್ತಿದ್ದಾರೆ. ಇದಕ್ಕೆ ತುರ್ತಾಗಿ ಕಡಿವಾಣ ಬೀಳದಿದ್ದರೆ ಗಂಭೀರ ಪರಿಣಾಮ ಎದುರಿಸುವುದು ಅನಿವಾರ್ಯವಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p>.<p>‘ಇ–ಆಸ್ತಿ ದಾಖಲೀಕರಣ ಪ್ರಕ್ರಿಯೆ ವಿಳಂಬವಾಗುತ್ತಿದೆ. ಯಾವುದೇ ಕಡತ ಬೇಗ ವಿಲೇವಾರಿಯಾಗುತ್ತಿಲ್ಲ’ ಎಂದು ದೂರಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ಮಂಗೇಶ ಪವಾರ, ‘ಇ–ಆಸ್ತಿ ದಾಖಲೀಕರಣ ಪ್ರಕ್ರಿಯೆ ಯಾವ ಕಾರಣಕ್ಕೂ ವಿಳಂಬವಾಗಬಾರದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಬ್ಬಂದಿ ಕೆಲಸ ಮಾಡಬೇಕು’ ಎಂದು ಸೂಚಿಸಿದರು. </p>.<p>‘ಇ–ಆಸ್ತಿ ದಾಖಲೀಕರಣ ವೇಳೆ, ಸಾಕಷ್ಟು ತಪ್ಪಾಗುತ್ತಿವೆ. ಇದನ್ನು ಸರಿಪಡಿಸಲು ಅಲೆದಾಡಿಸುತ್ತಿದ್ದಾರೆ ಎಂದು ಜನರು ದೂರಿದ್ದಾರೆ. ಮುಂದೆ ಇಂಥ ತಪ್ಪುಗಳಾಗಬಾರದು. ತಪ್ಪೆಸಗಿದ ಸಿಬ್ಬಂದಿಗೆ ದಂಡ ವಿಧಿಸಬೇಕು. ಪಾಲಿಕೆಗೆ ಬರಬೇಕಿರುವ ಆಸ್ತಿಯನ್ನು ಸಕಾಲಕ್ಕೆ ವಸೂಲಿ ಮಾಡಬೇಕು’ ಎಂದು ತಿಳಿಸಿದರು.</p>.<p>ಆಯುಕ್ತೆ ಬಿ.ಶುಭ, ‘ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕ್ರಮ ವಹಿಸಲಾಗುವುದು. ಇ–ಆಸ್ತಿ ದಾಖಲೀಕರಣ ಪ್ರಕ್ರಿಯೆ ವಿಳಂಬವಾಗದಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ಉಪಮೇಯರ್ ವಾಣಿ ಜೋಶಿ, ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ, ವಿರೋಧ ಪಕ್ಷದ ನಾಯಕ ಮುಜಮ್ಮಿಲ್ ಡೋಣಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>