<p><strong>ಐಗಳಿ</strong>: ‘ಅಥಣಿ ತಾಲ್ಲೂಕಿನ ಪೂರ್ವ ಭಾಗದ ಅಡಹಳ್ಳಿ, ಅಡಹಳ್ಳಟ್ಟಿ, ಕೋಹಳ್ಳಿ, ರಾಮತೀರ್ಥ ಸೇರಿದಂತೆ 8 ಗ್ರಾಮಗಳ ಕೆರೆ ತುಂಬಿಸುವ ಎರಡನೆಯ ₹95 ಕೋಟಿ ವೆಚ್ಚದ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ಕಾರ್ಯ ಈಗ ಪ್ರಾರಂಭವಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.</p>.<p>ಸಮೀಪದ ಅಡಹಳ್ಳಟ್ಟಿ ಗ್ರಾಮದ ತಾಂವಶಿ ತೋಟದಲ್ಲಿ ಕೆರೆ ತುಂಬುವ ನೀರಾವರಿ ಯೋಜನೆಯ ಪೈಪ್ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕರಿಮಸೂತಿ ಏತನೀರಾವರಿ ಕಾಲುವೆಯಿಂದ ವಂಚಿತವಾದ ಹಳ್ಳಿಗಳ ಭೂ ಪ್ರದೇಶಕ್ಕೆ ಸುಮಾರು ₹142 ಕೋಟಿ ವೆಚ್ಚದಲ್ಲಿ ಕೆರೆ ತುಂಬಿಸಲು ಪ್ರಥಮ ಹಂತದಲ್ಲಿ ₹49 ಕೋಟಿ ಈಗಾಗಲೇ ಬಿಡುಗಡೆಯಾಗಿದೆ. ಕಾಮಗಾರಿ ಮುಕ್ತಾಯ ಹಂತದಲ್ಲಿದೆ, 2ನೇ ಹಂತದ ಕಾಮಗಾರಿಗೆ ಆದಷ್ಟು ಬೇಗ ಪ್ರಾರಂಭಿಸಿ ಈ ಭಾಗ ಬರುವ ದಿನಗಳಲ್ಲಿ ಹಸಿರಾಗಲು ಕಾಲ ಸನ್ನಿಹಿತವಾಗಿದೆ’ ಎಂದರು.</p>.<p>ಅಡಹಳ್ಳಟ್ಟಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ತಾಂವಶಿ ಮಾತನಾಡಿ, ‘ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರೂ ರಾಜ್ಯದಲ್ಲಿಯೇ ಅತಿ ಹೆಚ್ಚು ಅನುದಾನ ತಂದಿದ್ದಾರೆ’ ಎಂದರು.</p>.<p>ಸಿ.ಎಸ್.ನೇಮಗೌಡ, ರಮೇಶ ಗಾಣಿಗೇರ, ಸಿದರಾಯ ನಾಯಿಕ, ಚಿಕ್ಕನೀರಾವರಿ ಇಲಾಖೆ ಅಧಿಕಾರಿ ಎಸ್.ಎಸ್. ಮಾಕಾಣಿ, ಘಟಿವಾಳಪ್ಪ ಗುಡ್ಡಾಪುರ, ನೂರ್ ಅಹ್ಮದ್ ಡೊಂಗರಗಾಂವ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಗಳಿ</strong>: ‘ಅಥಣಿ ತಾಲ್ಲೂಕಿನ ಪೂರ್ವ ಭಾಗದ ಅಡಹಳ್ಳಿ, ಅಡಹಳ್ಳಟ್ಟಿ, ಕೋಹಳ್ಳಿ, ರಾಮತೀರ್ಥ ಸೇರಿದಂತೆ 8 ಗ್ರಾಮಗಳ ಕೆರೆ ತುಂಬಿಸುವ ಎರಡನೆಯ ₹95 ಕೋಟಿ ವೆಚ್ಚದ ಪ್ರಕ್ರಿಯೆ ಮುಗಿದಿದೆ. ಕಾಮಗಾರಿ ಕಾರ್ಯ ಈಗ ಪ್ರಾರಂಭವಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.</p>.<p>ಸಮೀಪದ ಅಡಹಳ್ಳಟ್ಟಿ ಗ್ರಾಮದ ತಾಂವಶಿ ತೋಟದಲ್ಲಿ ಕೆರೆ ತುಂಬುವ ನೀರಾವರಿ ಯೋಜನೆಯ ಪೈಪ್ಲೈನ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಕರಿಮಸೂತಿ ಏತನೀರಾವರಿ ಕಾಲುವೆಯಿಂದ ವಂಚಿತವಾದ ಹಳ್ಳಿಗಳ ಭೂ ಪ್ರದೇಶಕ್ಕೆ ಸುಮಾರು ₹142 ಕೋಟಿ ವೆಚ್ಚದಲ್ಲಿ ಕೆರೆ ತುಂಬಿಸಲು ಪ್ರಥಮ ಹಂತದಲ್ಲಿ ₹49 ಕೋಟಿ ಈಗಾಗಲೇ ಬಿಡುಗಡೆಯಾಗಿದೆ. ಕಾಮಗಾರಿ ಮುಕ್ತಾಯ ಹಂತದಲ್ಲಿದೆ, 2ನೇ ಹಂತದ ಕಾಮಗಾರಿಗೆ ಆದಷ್ಟು ಬೇಗ ಪ್ರಾರಂಭಿಸಿ ಈ ಭಾಗ ಬರುವ ದಿನಗಳಲ್ಲಿ ಹಸಿರಾಗಲು ಕಾಲ ಸನ್ನಿಹಿತವಾಗಿದೆ’ ಎಂದರು.</p>.<p>ಅಡಹಳ್ಳಟ್ಟಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ತಾಂವಶಿ ಮಾತನಾಡಿ, ‘ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರೂ ರಾಜ್ಯದಲ್ಲಿಯೇ ಅತಿ ಹೆಚ್ಚು ಅನುದಾನ ತಂದಿದ್ದಾರೆ’ ಎಂದರು.</p>.<p>ಸಿ.ಎಸ್.ನೇಮಗೌಡ, ರಮೇಶ ಗಾಣಿಗೇರ, ಸಿದರಾಯ ನಾಯಿಕ, ಚಿಕ್ಕನೀರಾವರಿ ಇಲಾಖೆ ಅಧಿಕಾರಿ ಎಸ್.ಎಸ್. ಮಾಕಾಣಿ, ಘಟಿವಾಳಪ್ಪ ಗುಡ್ಡಾಪುರ, ನೂರ್ ಅಹ್ಮದ್ ಡೊಂಗರಗಾಂವ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>