ಹೋದ ವರ್ಷ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ನೆರೆ ಹಾಗೂ ಅತಿವೃಷ್ಟಿ ಉಂಟಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಸಂಭವಿಸಿತ್ತು. ಸಾವಿರಾರು ಮಂದಿ ಸಂತ್ರಸ್ತರಾಗಿದ್ದರು. ಹೀಗಾಗಿ, ನೆರೆ ಪರಿಹಾರ ಕಾರ್ಯಗಳಲ್ಲಿ ಅಧಿಕಾರಿಗಳು ತೊಡಗಬೇಕು, ಅವರಿಗೆ ಸಮಯ ಬೇಕು. ಆದ್ದರಿಂದ ಅಧಿವೇಶನವನ್ನು ಬೆಳಗಾವಿ ಬದಲಿಗೆ ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.