ಬೈಲಹೊಂಗಲ: ತಾಲ್ಲೂಕಿನ ಹಿಟ್ಟಣಗಿ ಗ್ರಾಮದಿಂದ ಮೇವು ಹೊತ್ತುಕೊಂಡು ಇಂಚಲ ರಸ್ತೆ ಮಾರ್ಗವಾಗಿ ರಾಯಬಾಗ ಕಡೆ ಗೋವಿನಜೋಳದ ಒಣಮೇವು ಸಾಗಿಸುತ್ತಿದ್ದ ಮೂರು ಟ್ರ್ಯಾಕ್ಟರ್ಗಳಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ಒಣಮೇವು ಸುಟ್ಟು ಕರಕಲಾದ ಘಟನೆ ಇಂಚಲ ರಸ್ತೆಯ ಹತ್ತಿರ ಬುಧವಾರ ಘಟನೆ ಸಂಭವಿಸಿದೆ.