<p><strong>ಬೈಲಹೊಂಗಲ</strong>: ‘ರಂಗಭೂಮಿ ಜಾತಿ, ಮತ, ಧರ್ಮವನ್ನು ಮೀರಿದ ವೇದಿಕೆ. ಅಲ್ಲಿ ಸಿಗುವ ಅನುಭವ ಒಳ್ಳೆಯ ವ್ಯಕ್ತಿಯಾಗಿ ರೂಪಿಸಲು ಸಹಕಾರಿಯಾಗುತ್ತದೆ’ ಎಂದು ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ರಂಗ ಚಿನ್ನಾರಿ ಕಾಸರಗೋಡು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗಡಿನಾಡು ಕಾಸರಗೋಡಿನಿಂದ ರಂಗ ಚಿನ್ನಾರಿ ತಂಡದ ನೇತೃತ್ವದಲ್ಲಿ ಬೆಳಗಾವಿ ಗಡಿಯಲ್ಲಿರುವ ವಿದ್ಯಾರ್ಥಿಗಳಿಗೆ ನಡೆದ ರಂಗ ರಸಗ್ರಾಹಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಒರೆಗೆ ಹಚ್ಚಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ರಂಗ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ರಂಗ ರಸಗ್ರಾಹಿ ಶಿಬಿರ ಮಾಡುವ ಮೂಲಕ ಹೊಸ ಸಾಹಸ, ರಂಗಭಾಷೆ ಬರೆದಿದ್ದಾರೆ’ ಎಂದರು.</p>.<p>ರಂಗನಟ, ನಿರ್ದೇಶಕ ಕಾಸರಗೋಡು ಚಿನ್ನಾ, ‘ರಂಗಭೂಮಿ ನನ್ನ ಪ್ರೀತಿಯ ಕ್ಷೇತ್ರ. ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ನಾನು ಕಲಿತ ವಿದ್ಯೆಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ’ ಎಂದರು.</p>.<p>ಮೂಕಾಭಿನಯ, ಮುಖವಾಡ ತಯಾರಿಕೆ, ಹಾಡುಗಳು, ಪ್ರಸಾಧನ ಸೇರಿದಂತೆ ನಟನಾ ಶಿಬಿರ ನಡೆಸಲಾಯಿತು.</p>.<p>ಪ್ರಾಚಾರ್ಯ ಡಾ.ಸಿ.ಬಿ.ಗಣಾಚಾರಿ ಮಾತನಾಡಿದರು. ನಿರ್ದೇಶಕರಾದ ಪ್ರಕಾಶ ಬೋಸ್ನವರ್ಕರ, ಅರುಣ ಪ್ರಕಾಶ ನಾಯಕ, ಕಾಶಿನಾಥ ಬಿರಾದಾರ, ಎಂ.ಎಚ್.ಪೆಂಟೇದ ವೇದಿಕೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ</strong>: ‘ರಂಗಭೂಮಿ ಜಾತಿ, ಮತ, ಧರ್ಮವನ್ನು ಮೀರಿದ ವೇದಿಕೆ. ಅಲ್ಲಿ ಸಿಗುವ ಅನುಭವ ಒಳ್ಳೆಯ ವ್ಯಕ್ತಿಯಾಗಿ ರೂಪಿಸಲು ಸಹಕಾರಿಯಾಗುತ್ತದೆ’ ಎಂದು ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ರಂಗ ಚಿನ್ನಾರಿ ಕಾಸರಗೋಡು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗಡಿನಾಡು ಕಾಸರಗೋಡಿನಿಂದ ರಂಗ ಚಿನ್ನಾರಿ ತಂಡದ ನೇತೃತ್ವದಲ್ಲಿ ಬೆಳಗಾವಿ ಗಡಿಯಲ್ಲಿರುವ ವಿದ್ಯಾರ್ಥಿಗಳಿಗೆ ನಡೆದ ರಂಗ ರಸಗ್ರಾಹಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಒರೆಗೆ ಹಚ್ಚಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ರಂಗ ನಿರ್ದೇಶಕ ಕಾಸರಗೋಡು ಚಿನ್ನಾ ಅವರು ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ರಂಗ ರಸಗ್ರಾಹಿ ಶಿಬಿರ ಮಾಡುವ ಮೂಲಕ ಹೊಸ ಸಾಹಸ, ರಂಗಭಾಷೆ ಬರೆದಿದ್ದಾರೆ’ ಎಂದರು.</p>.<p>ರಂಗನಟ, ನಿರ್ದೇಶಕ ಕಾಸರಗೋಡು ಚಿನ್ನಾ, ‘ರಂಗಭೂಮಿ ನನ್ನ ಪ್ರೀತಿಯ ಕ್ಷೇತ್ರ. ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ನಾನು ಕಲಿತ ವಿದ್ಯೆಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ’ ಎಂದರು.</p>.<p>ಮೂಕಾಭಿನಯ, ಮುಖವಾಡ ತಯಾರಿಕೆ, ಹಾಡುಗಳು, ಪ್ರಸಾಧನ ಸೇರಿದಂತೆ ನಟನಾ ಶಿಬಿರ ನಡೆಸಲಾಯಿತು.</p>.<p>ಪ್ರಾಚಾರ್ಯ ಡಾ.ಸಿ.ಬಿ.ಗಣಾಚಾರಿ ಮಾತನಾಡಿದರು. ನಿರ್ದೇಶಕರಾದ ಪ್ರಕಾಶ ಬೋಸ್ನವರ್ಕರ, ಅರುಣ ಪ್ರಕಾಶ ನಾಯಕ, ಕಾಶಿನಾಥ ಬಿರಾದಾರ, ಎಂ.ಎಚ್.ಪೆಂಟೇದ ವೇದಿಕೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>