<p><strong>ಖಾನಾಪುರ</strong>: ತಾಲ್ಲೂಕಿನ ನಾಗರಗಾಳಿ ವಲಯದ ಅರಣ್ಯದಲ್ಲಿ ಸ್ವಾಭಾವಿಕವಾಗಿ ಬೆಳೆದಿದ್ದ ಶ್ರೀಗಂಧದ ಗಿಡವೊಂದನ್ನು ಬೇರು ಸಮೇತ ಕಡಿದು ಸಾಗಿಸುತ್ತಿರುವ ಆರೋಪದಡಿ ಮಂಗಳವಾರ ನಾಗರಗಾಳಿ ವಲಯ ಅರಣ್ಯಾಧಿಕಾರಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಗರ್ಬೇನಟ್ಟಿ ಗ್ರಾಮದ ನಿವಾಸಿ ಮಂಜು ಬಸಪ್ಪ ಮುರಗೋಡ ಎಂಬಾತನನ್ನು ಬಂಧಿಸಿ ಆತನಿಂದ 1 ಕೆ.ಜಿ 200 ಗ್ರಾಂ ತೂಕದ ಶ್ರೀಗಂಧದ ಗಿಡ, ಬೇರು ಹಾಗೂ ಸಾಗಣೆಗೆ ಬಳಸಿದ ಬೈಕ್ ವಶಕ್ಕೆ ಪಡೆದಿದ್ದಾರೆ.</p>.<p>ಬಂಧಿತನನ್ನು ನ್ಯಾಯಾಲಯದ ಸೂಚನೆಯಂತೆ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ನಾಗರಗಾಳಿ ಎ.ಸಿ.ಎಫ್ ಶಿವಾನಂದ ಮಗದುಮ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ನಾಗರಗಾಳಿ ಆರ್.ಎಫ್.ಒ ಪ್ರಶಾಂತ ಮಂಗಸೂಳಿ, ಮೇರಡಾ ಡಿ.ಆರ್.ಎಫ್.ಒ ಎನ್.ಜಿ ಹಿರೇಮಠ, ಸಿಬ್ಬಂದಿ ವಿಜಯ ಕೌಜಲಗಿ, ಮಂಜು ಗೌಡರ ಪ್ರದೀಪ ತುರಮರಿ, ಶ್ರವಣ ಕುಮಾರ ಭಾಗವಹಿಸಿದ್ದರು. ನಾಗರಗಾಳಿ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ</strong>: ತಾಲ್ಲೂಕಿನ ನಾಗರಗಾಳಿ ವಲಯದ ಅರಣ್ಯದಲ್ಲಿ ಸ್ವಾಭಾವಿಕವಾಗಿ ಬೆಳೆದಿದ್ದ ಶ್ರೀಗಂಧದ ಗಿಡವೊಂದನ್ನು ಬೇರು ಸಮೇತ ಕಡಿದು ಸಾಗಿಸುತ್ತಿರುವ ಆರೋಪದಡಿ ಮಂಗಳವಾರ ನಾಗರಗಾಳಿ ವಲಯ ಅರಣ್ಯಾಧಿಕಾರಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಗರ್ಬೇನಟ್ಟಿ ಗ್ರಾಮದ ನಿವಾಸಿ ಮಂಜು ಬಸಪ್ಪ ಮುರಗೋಡ ಎಂಬಾತನನ್ನು ಬಂಧಿಸಿ ಆತನಿಂದ 1 ಕೆ.ಜಿ 200 ಗ್ರಾಂ ತೂಕದ ಶ್ರೀಗಂಧದ ಗಿಡ, ಬೇರು ಹಾಗೂ ಸಾಗಣೆಗೆ ಬಳಸಿದ ಬೈಕ್ ವಶಕ್ಕೆ ಪಡೆದಿದ್ದಾರೆ.</p>.<p>ಬಂಧಿತನನ್ನು ನ್ಯಾಯಾಲಯದ ಸೂಚನೆಯಂತೆ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ನಾಗರಗಾಳಿ ಎ.ಸಿ.ಎಫ್ ಶಿವಾನಂದ ಮಗದುಮ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ನಾಗರಗಾಳಿ ಆರ್.ಎಫ್.ಒ ಪ್ರಶಾಂತ ಮಂಗಸೂಳಿ, ಮೇರಡಾ ಡಿ.ಆರ್.ಎಫ್.ಒ ಎನ್.ಜಿ ಹಿರೇಮಠ, ಸಿಬ್ಬಂದಿ ವಿಜಯ ಕೌಜಲಗಿ, ಮಂಜು ಗೌಡರ ಪ್ರದೀಪ ತುರಮರಿ, ಶ್ರವಣ ಕುಮಾರ ಭಾಗವಹಿಸಿದ್ದರು. ನಾಗರಗಾಳಿ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>