ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮುಖ್ಯಮಂತ್ರ ಬದಲಾವಣೆ ಕಾರ್ಯಸೂಚಿ ಇಲ್ಲ’: ಗೋವಿಂದ ಕಾರಜೋಳ

Last Updated 9 ಜೂನ್ 2021, 14:39 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿಯ ರಾಜ್ಯ ನಾಯಕರಲ್ಲಾಗಲಿ ಅಥವಾ ಕೇಂದ್ರದ ಹೈಕಮಾಂಡ್‌ನವರಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ಕಾರ್ಯಸೂಚಿ ಇಲ್ಲ. ಆ ಬಗ್ಗೆ ಆಲೋಚನೆಯನ್ನೂ ಮಾಡಿಲ್ಲ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಗುತ್ತದೆ ಎನ್ನುವುದು ಕೇವಲ ಊಹಾಪೋಹ. ಅದಕ್ಕೆ ರೆಕ್ಕೆಪುಕ್ಕ ಜೋಡಿಸುವ ಕೆಲಸವನ್ನು ಮಾಧ್ಯಮವು ಮಾಡುತ್ತಿದೆ. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪರ್ಯಾಯ ನಾಯಕತ್ವದ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT