<p><strong>ಬೆಳಗಾವಿ:</strong> ‘ನಾನು ಹುಟ್ಟಿದಾಗಿನಿಂದ ಮೈಸೂರು ದಸರಾ ನೋಡಿರಲಿಲ್ಲ. ಹೀಗಾಗಿ, ನಾನೂ ಸೇರಿ ನಾಲ್ವರು ಶಾಸಕರು ಮೈಸೂರು ಪ್ರವಾಸ ಮಾಡಿ ಬಂದಿದ್ದೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೈಸೂರು ಪ್ರವಾಸದ ವೇಳೆ ನಮ್ಮೊಂದಿಗೆ ಸಚಿವ ಸತೀಶ ಜಾರಕಿಹೊಳಿ ಅವರು ಇರಲಿಲ್ಲ’ ಎಂದರು.</p><p>‘ಸರ್ಕಾರ ನಮ್ಮನ್ನು ಮನೆಯ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಒಂದು ಮನೆ ಎಂದರೆ ಕೆಮ್ಮು– ನೆಗಡಿ ಇದ್ದೇ ಇರುತ್ತವೆ. ಅದನ್ನೆಲ್ಲ ನಾವು ಸರಿ ಪಡಿಸಿಕೊಳ್ಳುತ್ತೇವೆ. ಜಿಲ್ಲೆಯಲ್ಲಿ ನಾಯಕರ ಮಧ್ಯೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.</p><p>‘ಕಾಗವಾಡ ಕ್ಷೇತ್ರದ ಬಸವೇಶ್ವರ ಏತನೀರಾವರಿ ಯೋಜನೆಗೆ ಈಗಾಗಲೇ ₹1,200 ಕೋಟಿ ವೆಚ್ಚವಾಗಿದೆ. ಇನ್ನೂ ₹100 ಕೋಟಿ ನೀಡಿದರೆ ಯೋಜನೆ ಪೂರ್ಣಗೊಳ್ಳುತ್ತದೆ. 65 ಸಾವಿರ ಎಕರೆಗೆ ನೀರಾವರಿ ಸಿಗುತ್ತದೆ. ಹೀಗಾಗಿ, ಅನುದಾನಕ್ಕೆ ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರಿದ್ದೇನೆ. ಬೇರೆ ಭಿನ್ನಾಭಿಪ್ರಾಯ ಏನೂ ಇಲ್ಲ’ ಎಂದರು.</p><p>‘ರಮೇಶ ಜಾರಕಿಹೊಳಿ– ಜಗದೀಶ ಶೆಟ್ಟರ ಭೇಟಿ ಉದ್ದೇಶ ನನಗೆ ಗೊತ್ತಿಲ್ಲ. ನಾವಂತೂ ಬದುಕಿರುವವರೆಗೆ ಬಿಜೆಪಿಗೆ ಹೋಗುವುದಿಲ್ಲ. ಸತ್ತ ಮೇಲೆ ನಮ್ಮ ಹೆಣಗಳೂ ಹೋಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ನಾನು ಹುಟ್ಟಿದಾಗಿನಿಂದ ಮೈಸೂರು ದಸರಾ ನೋಡಿರಲಿಲ್ಲ. ಹೀಗಾಗಿ, ನಾನೂ ಸೇರಿ ನಾಲ್ವರು ಶಾಸಕರು ಮೈಸೂರು ಪ್ರವಾಸ ಮಾಡಿ ಬಂದಿದ್ದೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೈಸೂರು ಪ್ರವಾಸದ ವೇಳೆ ನಮ್ಮೊಂದಿಗೆ ಸಚಿವ ಸತೀಶ ಜಾರಕಿಹೊಳಿ ಅವರು ಇರಲಿಲ್ಲ’ ಎಂದರು.</p><p>‘ಸರ್ಕಾರ ನಮ್ಮನ್ನು ಮನೆಯ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಒಂದು ಮನೆ ಎಂದರೆ ಕೆಮ್ಮು– ನೆಗಡಿ ಇದ್ದೇ ಇರುತ್ತವೆ. ಅದನ್ನೆಲ್ಲ ನಾವು ಸರಿ ಪಡಿಸಿಕೊಳ್ಳುತ್ತೇವೆ. ಜಿಲ್ಲೆಯಲ್ಲಿ ನಾಯಕರ ಮಧ್ಯೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.</p><p>‘ಕಾಗವಾಡ ಕ್ಷೇತ್ರದ ಬಸವೇಶ್ವರ ಏತನೀರಾವರಿ ಯೋಜನೆಗೆ ಈಗಾಗಲೇ ₹1,200 ಕೋಟಿ ವೆಚ್ಚವಾಗಿದೆ. ಇನ್ನೂ ₹100 ಕೋಟಿ ನೀಡಿದರೆ ಯೋಜನೆ ಪೂರ್ಣಗೊಳ್ಳುತ್ತದೆ. 65 ಸಾವಿರ ಎಕರೆಗೆ ನೀರಾವರಿ ಸಿಗುತ್ತದೆ. ಹೀಗಾಗಿ, ಅನುದಾನಕ್ಕೆ ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರಿದ್ದೇನೆ. ಬೇರೆ ಭಿನ್ನಾಭಿಪ್ರಾಯ ಏನೂ ಇಲ್ಲ’ ಎಂದರು.</p><p>‘ರಮೇಶ ಜಾರಕಿಹೊಳಿ– ಜಗದೀಶ ಶೆಟ್ಟರ ಭೇಟಿ ಉದ್ದೇಶ ನನಗೆ ಗೊತ್ತಿಲ್ಲ. ನಾವಂತೂ ಬದುಕಿರುವವರೆಗೆ ಬಿಜೆಪಿಗೆ ಹೋಗುವುದಿಲ್ಲ. ಸತ್ತ ಮೇಲೆ ನಮ್ಮ ಹೆಣಗಳೂ ಹೋಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>