ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಪ್ರವಾಸಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ: ಶಾಸಕ ರಾಜು ಕಾಗೆ

Published 20 ಅಕ್ಟೋಬರ್ 2023, 14:01 IST
Last Updated 20 ಅಕ್ಟೋಬರ್ 2023, 14:01 IST
ಅಕ್ಷರ ಗಾತ್ರ

ಬೆಳಗಾವಿ: ‘ನಾನು ಹುಟ್ಟಿದಾಗಿನಿಂದ ಮೈಸೂರು ದಸರಾ ನೋಡಿರಲಿಲ್ಲ. ಹೀಗಾಗಿ, ನಾನೂ ಸೇರಿ ನಾಲ್ವರು ಶಾಸಕರು ಮೈಸೂರು ಪ್ರವಾಸ ಮಾಡಿ ಬಂದಿದ್ದೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮೈಸೂರು ಪ್ರವಾಸದ ವೇಳೆ ನಮ್ಮೊಂದಿಗೆ ಸಚಿವ ಸತೀಶ ಜಾರಕಿಹೊಳಿ ಅವರು ಇರಲಿಲ್ಲ’ ಎಂದರು.

‘ಸರ್ಕಾರ ನಮ್ಮನ್ನು ಮನೆಯ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಒಂದು ಮನೆ ಎಂದರೆ ಕೆಮ್ಮು– ನೆಗಡಿ ಇದ್ದೇ ಇರುತ್ತವೆ. ಅದನ್ನೆಲ್ಲ ನಾವು ಸರಿ ಪಡಿಸಿಕೊಳ್ಳುತ್ತೇವೆ. ಜಿಲ್ಲೆಯಲ್ಲಿ ನಾಯಕರ ಮಧ್ಯೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.

‘ಕಾಗವಾಡ ಕ್ಷೇತ್ರದ ಬಸವೇಶ್ವರ ಏತನೀರಾವರಿ ಯೋಜನೆಗೆ ಈಗಾಗಲೇ ₹1,200 ಕೋಟಿ ವೆಚ್ಚವಾಗಿದೆ. ಇನ್ನೂ ₹100 ಕೋಟಿ ನೀಡಿದರೆ ಯೋಜನೆ ಪೂರ್ಣಗೊಳ್ಳುತ್ತದೆ. 65 ಸಾವಿರ ಎಕರೆಗೆ ನೀರಾವರಿ ಸಿಗುತ್ತದೆ. ಹೀಗಾಗಿ, ಅನುದಾನಕ್ಕೆ ಮುಖ್ಯಮಂತ್ರಿ ಅವರ ಮೇಲೆ ಒತ್ತಡ ಹೇರಿದ್ದೇನೆ. ಬೇರೆ ಭಿನ್ನಾಭಿಪ್ರಾಯ ಏನೂ ಇಲ್ಲ’ ಎಂದರು.

‘ರಮೇಶ ಜಾರಕಿಹೊಳಿ– ಜಗದೀಶ ಶೆಟ್ಟರ ಭೇಟಿ ಉದ್ದೇಶ ನನಗೆ ಗೊತ್ತಿಲ್ಲ. ನಾವಂತೂ ಬದುಕಿರುವವರೆಗೆ ಬಿಜೆಪಿಗೆ ಹೋಗುವುದಿಲ್ಲ. ಸತ್ತ ಮೇಲೆ ನಮ್ಮ ಹೆಣಗಳೂ ಹೋಗುವುದಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT