<p><strong>ಬೆಳಗಾವಿ</strong>: ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ ಎಂದು ಸಕ್ಕರೆ ಸಚಿವ ಅರೆಬೈಲ್ ಶಿವರಾಮ್ ಹೆಬ್ಬಾರ ಹೇಳಿದರು.</p>.<p>ಇಲ್ಲಿನ ಗಣೇಶಪುರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>ಮುಖ್ಯಮಂತ್ರಿ ಬದಲಾವಣೆ ಸತ್ಯಕ್ಕೆ ದೂರವಾದುದು. ಅದನ್ನು ಪಕ್ಷದ ವರಿಷ್ಠರೇ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗ ಆ ವಿಷಯದಲ್ಲಿ ಪದೇ ಪದೇ ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸ್ವಪ್ನ ಬಿದ್ದಿರಬಹುದು. ಅವರನ್ನೇ ವಿಚಾರಿಸಿ' ಎಂದರು.</p>.<p>ಸಂಪುಟ ವಿಸ್ತರಣೆ ನಿರ್ಣಯ ಮುಖ್ಯಮಂತ್ರಿಗೆ ಬಿಟ್ಟಿದ್ದು. ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕೆ ಹೆಸರಾದವರು. ವರಿಷ್ಠರ ನಿರ್ದೇಶನದಂತೆ ಕ್ರಮ ಕೈಗೊಳ್ಳುತ್ತಾರೆ ಎಂದರು.</p>.<p>'ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಮಗಿಂತಲೂ ಮಾಧ್ಯಮದವರಿಗೇ ಹೆಚ್ಚು ಆಸಕ್ತಿ ಇದ್ದಂತಿದೆಯಲ್ಲಾ' ಎಂದರು.</p>.<p>'ಸಚಿವರಾಗಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಸಾಮಾನ್ಯ. ವಿಸ್ತರಣೆ ವೇಳೆ ಬೇಡಿಕೆಗಳೂ ಕೇಳಿಬರುತ್ತವೆ. ಅದೆಲ್ಲವನ್ನೂ ನಿಭಾಯಿಸುವ ಅನುಭವ ಮುಖ್ಯಮಂತ್ರಿಗಿದೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವುದೇ ಕೆಲಸ ಕೊಟ್ಟರೂ ಪ್ರಾಮಾಣಿಕವಾಗಿ ಮಾಡೋದಷ್ಟೆ ನನ್ನ ಜವಾಬ್ದಾರಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರೈಸಲಿದ್ದಾರೆ ಎಂದು ಸಕ್ಕರೆ ಸಚಿವ ಅರೆಬೈಲ್ ಶಿವರಾಮ್ ಹೆಬ್ಬಾರ ಹೇಳಿದರು.</p>.<p>ಇಲ್ಲಿನ ಗಣೇಶಪುರದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಪಾಲ್ಗೊಳ್ಳಲು ಬಂದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>ಮುಖ್ಯಮಂತ್ರಿ ಬದಲಾವಣೆ ಸತ್ಯಕ್ಕೆ ದೂರವಾದುದು. ಅದನ್ನು ಪಕ್ಷದ ವರಿಷ್ಠರೇ ಸ್ಪಷ್ಟಪಡಿಸಿದ್ದಾರೆ. ಹೀಗಿರುವಾಗ ಆ ವಿಷಯದಲ್ಲಿ ಪದೇ ಪದೇ ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸ್ವಪ್ನ ಬಿದ್ದಿರಬಹುದು. ಅವರನ್ನೇ ವಿಚಾರಿಸಿ' ಎಂದರು.</p>.<p>ಸಂಪುಟ ವಿಸ್ತರಣೆ ನಿರ್ಣಯ ಮುಖ್ಯಮಂತ್ರಿಗೆ ಬಿಟ್ಟಿದ್ದು. ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕೆ ಹೆಸರಾದವರು. ವರಿಷ್ಠರ ನಿರ್ದೇಶನದಂತೆ ಕ್ರಮ ಕೈಗೊಳ್ಳುತ್ತಾರೆ ಎಂದರು.</p>.<p>'ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಮಗಿಂತಲೂ ಮಾಧ್ಯಮದವರಿಗೇ ಹೆಚ್ಚು ಆಸಕ್ತಿ ಇದ್ದಂತಿದೆಯಲ್ಲಾ' ಎಂದರು.</p>.<p>'ಸಚಿವರಾಗಲು ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಸಾಮಾನ್ಯ. ವಿಸ್ತರಣೆ ವೇಳೆ ಬೇಡಿಕೆಗಳೂ ಕೇಳಿಬರುತ್ತವೆ. ಅದೆಲ್ಲವನ್ನೂ ನಿಭಾಯಿಸುವ ಅನುಭವ ಮುಖ್ಯಮಂತ್ರಿಗಿದೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವುದೇ ಕೆಲಸ ಕೊಟ್ಟರೂ ಪ್ರಾಮಾಣಿಕವಾಗಿ ಮಾಡೋದಷ್ಟೆ ನನ್ನ ಜವಾಬ್ದಾರಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>