ಒಂದು ವೇಳೆ, ರಾತ್ರಿ ಸಮಯದಲ್ಲಿ ಅಂತ್ಯಕ್ರಿಯೆ ನಡೆಸಬೇಕಾದರೆ ಬೆಳಕಿನ ವ್ಯವಸ್ಥೆಯೂ ಇಲ್ಲಿಲ್ಲ. ಶವ ಹೊತ್ತವರು ಜೀವ ಕೈಯಲ್ಲಿ ಹಿಡಿದುಕೊಂಡು ಸಾಗಿ ಬರಬೇಕಾಗಿದೆ. ಸಮೀಪದಲ್ಲೇ ಸ್ಥಳೀಯರು ಮಲ ವಿಸರ್ಜನೆ ಮಾಡುವುದರಿಂದ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಅಂತ್ಯಕ್ರಿಯೆಗೆ ಬಂದವರು ಮೂಗು ಮುಚ್ಚಿಕೊಂಡು ಹೋಗಬೇಕಾಗಿದೆ. ಇಲ್ಲಿನ ಅವ್ಯವ್ಥೆಯು, ಮೃತರಾದವರಿಗೆ ಗೌರವದ ವಿದಾಯ ಹೇಳುವ ಕಾರ್ಯಕ್ಕೆ ಅಡ್ಡಿಯಾಗಿ ಪರಿಣಮಿಸಿದೆ.