ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಮಾತನಾಡಿ, ‘ಅಪಘಾತ, ಹೆರಿಗೆ, ಥಲೆಸಿಮಿಯಾ ಹಾಗೂ ಶಸ್ತ್ರಚಿಕಿತ್ಸೆ ಮುಂತಾದ ಸಮಸ್ಯೆಗಳಿಂದ ದೇಶದಲ್ಲಿ ಪ್ರತಿ ನಿಮಿಷಕ್ಕೆ ಇಬ್ಬರು ಸಾವಿಗೀಡಾಗುತ್ತಿದ್ದಾರೆ. ಶರವೇಗದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಪ್ರತಿ ಅರ್ಹ ವ್ಯಕ್ತಿ ರಕ್ತದಾನ ಮಾಡಿದರೆ ಇಂತಹ ಸಾವು– ನೋವುಗಳನ್ನು ತಡೆಯಬಹುದಾಗಿದೆ’ ಎಂದು ತಿಳಿಸಿದರು.