ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣವನ್ನು ಕಂಟೈನ್ಮೆಂಟ್ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲಿಂದ ಜನರು ಹೊರ ಬಾರದಂತೆ ಉಗಾರ–ಕುಡಚಿ ಮಧ್ಯದಲ್ಲಿರುವ ರೈಲು ಹಳಿ ಹಾಗೂ ರಸ್ತೆ ಮಾರ್ಗವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಆದರೆ, ಅಲ್ಲಿನ ಕೆಲವು ಮದ್ಯಪ್ರಿಯರು ಕೃಷ್ಣಾ ನದಿಯನ್ನು ಈಜಿ ಐನಾಪುರಕ್ಕೆ ಬಂದು ಮದ್ಯ ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ. ಇದು, ಐನಾಪುರ ಸೇರಿದಂತೆ ವಿವಿಧ ಗ್ರಾಮಗಳ ಜನರಲ್ಲಿ ಆತಂಕ ಉಂಟು ಮಾಡಿದೆ. ಕೆಲವರು ನದಿಯಲ್ಲಿ ಈಜಿ ದುಸ್ಸಾಹಸ ಮಾಡಿದ್ದಾರೆ ಎನ್ನಲಾಗುತ್ತಿದೆ. ‘ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿಗಾ ವಹಿಸಬೇಕು’ ಎಂದು ಐನಾಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.