<p><strong>ಅಥಣಿ:</strong> ‘ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಇದು ಸರಿಯಾದ ಸಮಯ ಕೇಂದ್ರ ಸರ್ಕಾರ ಉಗ್ರಗಾಮಿಗಳನ್ನು ಮಟ್ಟ ಹಾಕುವಲ್ಲಿ ತೆಗೆದುಕೊಳ್ಳುವ ಎಲ್ಲ ದಿಟ್ಟ ನಿರ್ಧಾರಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.<br><br>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರಗಾಮಿಗಳು ಅಟ್ಟಹಾಸ ಮೆರೆದು 27 ಜನ ಪ್ರವಾಸಿಗರನ್ನು ಹತ್ಯೆ ಮಾಡಿರುವ ದುಷ್ಕೃತ್ಯವನ್ನು ಖಂಡಿಸುತ್ತೇನೆ ಎಂದರು.</p>.<p>‘ನಾನು ಕೂಡ ಕಳೆದ ಆರು ತಿಂಗಳ ಹಿಂದೆ ಜಮ್ಮು ಕಾಶ್ಮೀರದ ಅನೇಕ ಪ್ರವಾಸಿ ತಾಣಗಳಿಗೆ ಭೇಟಿಕೊಟ್ಟು ಬಂದಿದ್ದೇನೆ. ಅದೊಂದು ಭೂಲೋಕದ ಸ್ವರ್ಗವಿದ್ದಂತೆ. ಈ ದುಷ್ಕೃತ್ಯದಿಂದ ಮತ್ತೆ ಅಲ್ಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ. ಅಲ್ಲದೆ ಈ ಘಟನೆ ಇಡೀ ಭಾರತೀಯರ ನೋವಿಗೆ ಕಾರಣವಾಗಿದೆ’ ಎಂದರು.</p>.<p>‘ಅಕ್ರಮವಾಗಿ ಭಾರತದಲ್ಲಿ ವಲಸಿರುವ ಪಾಕಿಸ್ತಾನಿಗಳನ್ನು, ವಿಸಾ ಪಡೆದುಕೊಂಡು ಬಂದಿರುವ ಜನರ ವಿಸಾ ರದ್ದುಪಡಿಸಿ ಅವರನ್ನು ಭಾರತದಿಂದ ಹೊರ ಹೋಗುವಂತೆ ಸೂಚನೆ ನೀಡಿದ್ದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ರಾಜ್ಯ ತಾಂತ್ರಿಕ 5 ನಿರ್ಧಾರಗಳು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುವುದು ಒಳಿತಲ್ಲ, ರಾಜ್ಯ ಹಾಗೂ ಕೇಂದ್ರದ ನಾಯಕರು ಒಗ್ಗಟ್ಟಿನಿಂದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು’ ಎಂದರು.</p>.<p>ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾದ್ಯಕ್ಷೆ ಭುವನೇಶ್ವರಿ ಬಿರಪ್ಪಾ ಯಕ್ಕಂಚಿ, ಸದಸ್ಯರಾದ ರಾಜಶೇಖರ ಗುಡೋಡಗಿ, ಮಲ್ಲಿಕಾರ್ಜುನ ಬುಟಾಳಿ, ಪ್ರಮೋದ ಬಿಳ್ಳೂರ, ರಮೇಶ ಪವಾರ , ಸಯ್ಯದಾಮೀನ ಗದ್ಯಾಳ, ದತ್ತಾ ವಾಸ್ಟರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ‘ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಇದು ಸರಿಯಾದ ಸಮಯ ಕೇಂದ್ರ ಸರ್ಕಾರ ಉಗ್ರಗಾಮಿಗಳನ್ನು ಮಟ್ಟ ಹಾಕುವಲ್ಲಿ ತೆಗೆದುಕೊಳ್ಳುವ ಎಲ್ಲ ದಿಟ್ಟ ನಿರ್ಧಾರಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.<br><br>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರಗಾಮಿಗಳು ಅಟ್ಟಹಾಸ ಮೆರೆದು 27 ಜನ ಪ್ರವಾಸಿಗರನ್ನು ಹತ್ಯೆ ಮಾಡಿರುವ ದುಷ್ಕೃತ್ಯವನ್ನು ಖಂಡಿಸುತ್ತೇನೆ ಎಂದರು.</p>.<p>‘ನಾನು ಕೂಡ ಕಳೆದ ಆರು ತಿಂಗಳ ಹಿಂದೆ ಜಮ್ಮು ಕಾಶ್ಮೀರದ ಅನೇಕ ಪ್ರವಾಸಿ ತಾಣಗಳಿಗೆ ಭೇಟಿಕೊಟ್ಟು ಬಂದಿದ್ದೇನೆ. ಅದೊಂದು ಭೂಲೋಕದ ಸ್ವರ್ಗವಿದ್ದಂತೆ. ಈ ದುಷ್ಕೃತ್ಯದಿಂದ ಮತ್ತೆ ಅಲ್ಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ. ಅಲ್ಲದೆ ಈ ಘಟನೆ ಇಡೀ ಭಾರತೀಯರ ನೋವಿಗೆ ಕಾರಣವಾಗಿದೆ’ ಎಂದರು.</p>.<p>‘ಅಕ್ರಮವಾಗಿ ಭಾರತದಲ್ಲಿ ವಲಸಿರುವ ಪಾಕಿಸ್ತಾನಿಗಳನ್ನು, ವಿಸಾ ಪಡೆದುಕೊಂಡು ಬಂದಿರುವ ಜನರ ವಿಸಾ ರದ್ದುಪಡಿಸಿ ಅವರನ್ನು ಭಾರತದಿಂದ ಹೊರ ಹೋಗುವಂತೆ ಸೂಚನೆ ನೀಡಿದ್ದು ಸ್ವಾಗತಾರ್ಹ. ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ರಾಜ್ಯ ತಾಂತ್ರಿಕ 5 ನಿರ್ಧಾರಗಳು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡುವುದು ಒಳಿತಲ್ಲ, ರಾಜ್ಯ ಹಾಗೂ ಕೇಂದ್ರದ ನಾಯಕರು ಒಗ್ಗಟ್ಟಿನಿಂದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು’ ಎಂದರು.</p>.<p>ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಉಪಾದ್ಯಕ್ಷೆ ಭುವನೇಶ್ವರಿ ಬಿರಪ್ಪಾ ಯಕ್ಕಂಚಿ, ಸದಸ್ಯರಾದ ರಾಜಶೇಖರ ಗುಡೋಡಗಿ, ಮಲ್ಲಿಕಾರ್ಜುನ ಬುಟಾಳಿ, ಪ್ರಮೋದ ಬಿಳ್ಳೂರ, ರಮೇಶ ಪವಾರ , ಸಯ್ಯದಾಮೀನ ಗದ್ಯಾಳ, ದತ್ತಾ ವಾಸ್ಟರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>