<p><strong>ಚಿಕ್ಕೋಡಿ: </strong>ಇಲ್ಲಿನ ವೆಂಕಟೇಶ ಗಲ್ಲಿಯಲ್ಲಿರುವ ಕನ್ನಡ ಕಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಮೊದಲಾದ ಮೂಲಸೌಕರ್ಯಗಳಿಲ್ಲದೇ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿ ಪರದಾಡುತ್ತಿದ್ದಾರೆ.</p>.<p>ಹಲವು ದಶಕಗಳಿಂದ ಸ್ವಂತ ಕಟ್ಟಡ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಸ್ಥಳೀಯ ವೇಂಕಟೇಶ ಮಂದಿರ ವ್ಯವಸ್ಥಾಪಕ ಸಮಿತಿಗೆ ಸೇರಿದ ಕಟ್ಟಡದ 3 ಕೊಠಡಿಗಳನ್ನು ಬಾಡಿಗೆಗೆ ಪಡೆದು ಶಾಲೆ ನಡೆಸಲಾಗುತ್ತಿದೆ. 1ರಿಂದ 5ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದ್ದು, 32 ಮಕ್ಕಳು ವ್ಯಾಸಂಗ ಮಾಡುತ್ತಾರೆ.</p>.<p>2 ಕೊಠಡಿಯಲ್ಲಿ 5 ತರಗತಿಗಳು ನಡೆಯುತ್ತಿವೆ! ಒಂದನ್ನು ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಲು ಬಳಕೆ ಮಾಡಲಾಗುತ್ತದೆ. ಇದರಿಂದ ಕೇವಲ 2 ಕೊಠಡಿಗಳಲ್ಲಿ 5 ತರಗತಿಗಳ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲು ಶಿಕ್ಷಕರು ಬಹಳಷ್ಟು ಕಸರತ್ತು ನಡೆಸುತ್ತಿದ್ದಾರೆ. ವಿದ್ಯಾಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಪೋಷಕರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಶೌಚಾಲಯವೇ ಇಲ್ಲ</strong></p>.<p>‘ದೇಶದೆಲ್ಲೆಡೆ ಶೌಚಾಲಯ ನಿರ್ಮಾಣ, ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಬಗ್ಗೆ ಅಬ್ಬರದ ಪ್ರಚಾರವನ್ನು ಸರ್ಕಾರ ನಡೆಸುತ್ತಿದೆ. ಆದರೆ, ಈ ಶಾಲೆಯಲ್ಲಿ ಶೌಚಾಲಯವೇ ಇಲ್ಲದೇ ಇರುವುದು ದುರ್ದೈವದ ಸಂಗತಿ. ಇದರಿಂದ ಮಕ್ಕಳು, ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಶಾಲೆಯು ಮೂಲ ಸೌಲಭ್ಯದಿಂದ ವಂಚಿತವಾಗಿದೆ. ಮಕ್ಕಳು ಆಟವಾಡಲು ಮೈದಾನವೂ ಇಲ್ಲ. ಶಾಲೆ ಮುಂಭಾಗದಲ್ಲಿ ರಸ್ತೆಯಲ್ಲೇ ಮಕ್ಕಳು ಆಡಬೇಕಾಗಿದೆ. ರಸ್ತೆಯಲ್ಲಿ ಓಡಾಡುವ ವಾಹನಗಳಿಂದ ಅಪಘಾತದ ಭೀತಿ ಮಕ್ಕಳನ್ನು ಕಾಡುತ್ತಿದೆ.</p>.<p>‘ಶಾಲೆಯಲ್ಲಿ 32 ಮಕ್ಕಳು ಇದ್ದು, 2 ಕೊಠಡಿಗಳಲ್ಲಿ ಶಿಕ್ಷಣ ನೀಡುವುದು ಕಷ್ಟದ ಕೆಲಸವಾಗಿದೆ. ಶೌಚಾಲಯ, ಮೈದಾನ ಇಲ್ಲದೇ ಅನಾನುಕೂಲವಾಗಿದೆ. ಶಾಲೆಗಾಗಿ ಪ್ರತ್ಯೇಕ ಜಾಗವಿದ್ದರೂ ಕಟ್ಟಡ ನಿರ್ಮಾಣ ಮಾಡುವ ಭಾಗ್ಯ ಕೂಡಿ ಬಂದಿಲ್ಲ. ಈ ಕುರಿತು ಶಿಕ್ಷಣ ಇಲಾಖೆಗೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಮುಖ್ಯ ಶಿಕ್ಷಕಿ ನಿರ್ಮಲಾ ರೂಗರೂಗಿ ಹೇಳುತ್ತಾರೆ.</p>.<p>2015ರಲ್ಲಿ ಘಾಲೆಗಲ್ಲಿಯ ಹಳೆ ಮರಾಠಿ ಶಾಲೆಯ ಹತ್ತಿರ ಜಾಗ ಮೀಸಲಿಡಲಾಗಿದೆ. ಆದರೆ, ಕಟ್ಟಡ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇನ್ನೂ ಎಷ್ಟು ವರ್ಷ ಬಾಡಿಗೆ ಕೊಠಡಿಯಲ್ಲಿ ಶಾಲೆ ನಡೆಸಬೇಕು ಎನ್ನುವುದು ಪಾಲಕರ ಪ್ರಶ್ನೆಯಾಗಿದೆ.</p>.<p>‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಒಳ್ಳೆಯ ಕಟ್ಟಡ, ಶೌಚಾಲಯ ಅಗತ್ಯವಿದೆ. ಕಟ್ಟಡಕ್ಕಾಗಿ ಎಸ್ಡಿಎಂಸಿ ಸಭೆಯಲ್ಲಿ ಠರಾವು ಮಾಡಿ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ನೀಡಲಾಗಿದೆ. ಆದರೂ, ಶಿಕ್ಷಣ ಇಲಾಖೆ ಈ ಕುರಿತು ಕ್ರಮ ಕೈಗೊಳ್ಳದೇ ಇರುವುದು ಬೇಸರ ತರಿಸಿದೆ’ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಲತಾ ಸುರೇಶ ಬಾಗಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರತಿಕ್ರಿಯೆಗೆ ಬಿಇಒ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ: </strong>ಇಲ್ಲಿನ ವೆಂಕಟೇಶ ಗಲ್ಲಿಯಲ್ಲಿರುವ ಕನ್ನಡ ಕಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಮೊದಲಾದ ಮೂಲಸೌಕರ್ಯಗಳಿಲ್ಲದೇ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿ ಪರದಾಡುತ್ತಿದ್ದಾರೆ.</p>.<p>ಹಲವು ದಶಕಗಳಿಂದ ಸ್ವಂತ ಕಟ್ಟಡ ಇಲ್ಲದೇ ಬಾಡಿಗೆ ಕಟ್ಟಡದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಸ್ಥಳೀಯ ವೇಂಕಟೇಶ ಮಂದಿರ ವ್ಯವಸ್ಥಾಪಕ ಸಮಿತಿಗೆ ಸೇರಿದ ಕಟ್ಟಡದ 3 ಕೊಠಡಿಗಳನ್ನು ಬಾಡಿಗೆಗೆ ಪಡೆದು ಶಾಲೆ ನಡೆಸಲಾಗುತ್ತಿದೆ. 1ರಿಂದ 5ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದ್ದು, 32 ಮಕ್ಕಳು ವ್ಯಾಸಂಗ ಮಾಡುತ್ತಾರೆ.</p>.<p>2 ಕೊಠಡಿಯಲ್ಲಿ 5 ತರಗತಿಗಳು ನಡೆಯುತ್ತಿವೆ! ಒಂದನ್ನು ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಲು ಬಳಕೆ ಮಾಡಲಾಗುತ್ತದೆ. ಇದರಿಂದ ಕೇವಲ 2 ಕೊಠಡಿಗಳಲ್ಲಿ 5 ತರಗತಿಗಳ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲು ಶಿಕ್ಷಕರು ಬಹಳಷ್ಟು ಕಸರತ್ತು ನಡೆಸುತ್ತಿದ್ದಾರೆ. ವಿದ್ಯಾಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಪೋಷಕರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಶೌಚಾಲಯವೇ ಇಲ್ಲ</strong></p>.<p>‘ದೇಶದೆಲ್ಲೆಡೆ ಶೌಚಾಲಯ ನಿರ್ಮಾಣ, ಸ್ವಚ್ಛತೆ ಹಾಗೂ ಸ್ವಚ್ಛತಾ ಅಭಿಯಾನದ ಬಗ್ಗೆ ಅಬ್ಬರದ ಪ್ರಚಾರವನ್ನು ಸರ್ಕಾರ ನಡೆಸುತ್ತಿದೆ. ಆದರೆ, ಈ ಶಾಲೆಯಲ್ಲಿ ಶೌಚಾಲಯವೇ ಇಲ್ಲದೇ ಇರುವುದು ದುರ್ದೈವದ ಸಂಗತಿ. ಇದರಿಂದ ಮಕ್ಕಳು, ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>ಶಾಲೆಯು ಮೂಲ ಸೌಲಭ್ಯದಿಂದ ವಂಚಿತವಾಗಿದೆ. ಮಕ್ಕಳು ಆಟವಾಡಲು ಮೈದಾನವೂ ಇಲ್ಲ. ಶಾಲೆ ಮುಂಭಾಗದಲ್ಲಿ ರಸ್ತೆಯಲ್ಲೇ ಮಕ್ಕಳು ಆಡಬೇಕಾಗಿದೆ. ರಸ್ತೆಯಲ್ಲಿ ಓಡಾಡುವ ವಾಹನಗಳಿಂದ ಅಪಘಾತದ ಭೀತಿ ಮಕ್ಕಳನ್ನು ಕಾಡುತ್ತಿದೆ.</p>.<p>‘ಶಾಲೆಯಲ್ಲಿ 32 ಮಕ್ಕಳು ಇದ್ದು, 2 ಕೊಠಡಿಗಳಲ್ಲಿ ಶಿಕ್ಷಣ ನೀಡುವುದು ಕಷ್ಟದ ಕೆಲಸವಾಗಿದೆ. ಶೌಚಾಲಯ, ಮೈದಾನ ಇಲ್ಲದೇ ಅನಾನುಕೂಲವಾಗಿದೆ. ಶಾಲೆಗಾಗಿ ಪ್ರತ್ಯೇಕ ಜಾಗವಿದ್ದರೂ ಕಟ್ಟಡ ನಿರ್ಮಾಣ ಮಾಡುವ ಭಾಗ್ಯ ಕೂಡಿ ಬಂದಿಲ್ಲ. ಈ ಕುರಿತು ಶಿಕ್ಷಣ ಇಲಾಖೆಗೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಮುಖ್ಯ ಶಿಕ್ಷಕಿ ನಿರ್ಮಲಾ ರೂಗರೂಗಿ ಹೇಳುತ್ತಾರೆ.</p>.<p>2015ರಲ್ಲಿ ಘಾಲೆಗಲ್ಲಿಯ ಹಳೆ ಮರಾಠಿ ಶಾಲೆಯ ಹತ್ತಿರ ಜಾಗ ಮೀಸಲಿಡಲಾಗಿದೆ. ಆದರೆ, ಕಟ್ಟಡ ನಿರ್ಮಾಣಕ್ಕಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇನ್ನೂ ಎಷ್ಟು ವರ್ಷ ಬಾಡಿಗೆ ಕೊಠಡಿಯಲ್ಲಿ ಶಾಲೆ ನಡೆಸಬೇಕು ಎನ್ನುವುದು ಪಾಲಕರ ಪ್ರಶ್ನೆಯಾಗಿದೆ.</p>.<p>‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಒಳ್ಳೆಯ ಕಟ್ಟಡ, ಶೌಚಾಲಯ ಅಗತ್ಯವಿದೆ. ಕಟ್ಟಡಕ್ಕಾಗಿ ಎಸ್ಡಿಎಂಸಿ ಸಭೆಯಲ್ಲಿ ಠರಾವು ಮಾಡಿ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ನೀಡಲಾಗಿದೆ. ಆದರೂ, ಶಿಕ್ಷಣ ಇಲಾಖೆ ಈ ಕುರಿತು ಕ್ರಮ ಕೈಗೊಳ್ಳದೇ ಇರುವುದು ಬೇಸರ ತರಿಸಿದೆ’ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಲತಾ ಸುರೇಶ ಬಾಗಿ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪ್ರತಿಕ್ರಿಯೆಗೆ ಬಿಇಒ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>