ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹೋದರನ ಪುತ್ರ ಹರ್ಷಿತ್ ಜನ್ಮ ದಿನ: ಹುಲಿ ದತ್ತು ಪಡೆದ ಲಕ್ಷ್ಮಿ ಹೆಬ್ಬಾಳಕರ

Last Updated 14 ಜೂನ್ 2021, 8:28 IST
ಅಕ್ಷರ ಗಾತ್ರ

ಬೆಳಗಾವಿ: ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮ ದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ‘ಶೌರ್ಯ’ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.

‘ಆರಂಭಿಕವಾಗಿ ₹ 1 ಲಕ್ಷ ಚೆಕ್ ಅನ್ನು ಅರಣ್ಯಾಧಿಕಾರಿಗೆ ಹಸ್ತಾಂತರಿಸಿದ್ದೇನೆ. ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿದ್ದೇನೆ. ಲಾಕ್‌ಡೌನ್ ಕಾರಣದಿಂದಾಗಿ ಪ್ರಾಣಿಸಂಗ್ರಹಾಲಯಗಳಿಗೆ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಲಿ ದತ್ತು ಸ್ವೀಕರಿಸಿದ್ದೇನೆ’ ಎಂದು ಹೇಳಿದರು.

‘ಸಾರ್ವಜನಿಕರು ಪ್ರಾಣಿಗಳ ದತ್ತು ಪಡೆಯಬೇಕು’ ಎಂದು ಸಲಹೆ ನೀಡಿದರು.

ಮುಖಂಡ ಚನ್ನರಾಜ ಹಟ್ಟಿಹೊಳಿ, ಡಿಎಫ್‌ಒ ಅಮರನಾಥ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT