ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಕಲ್ಲೋಳಿಕರ, ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ ತೇಲಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿ, ಮೃಣಾಲ್ ಹೆಬ್ಬಾಳಕರ ಅವರನ್ನು ವಿಚಾರಣೆ ನಡೆಸಿತು.
ಸಚಿವೆ ಲಕ್ಷ್ಮೀ ಅವರ ಪುತ್ರ ಮೃಣಾಲ್ ಕೊರಳಲ್ಲಿ ಧರಿಸಿದ್ದ ಚಿನ್ನಾಭರಣದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇತ್ತು. ಇದರ ಫೋಟೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನೋಟಿಸ್ ನೀಡಿ, ದಾಳಿ ಮಾಡಿದರು.