‘ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದನಿ ಎತ್ತಿದ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬರು. ಯುದ್ಧದಲ್ಲಿ ರಾಕೆಟ್ ತಂತ್ರಜ್ಞಾನ, ಮೈಸೂರು ರಾಜ್ಯಕ್ಕೆ ರೇಷ್ಮೆಯನ್ನು ಪರಿಚಯಿಸಿದರು. ಇಂತಹ ಉದಾತ್ತ ವ್ಯಕ್ತಿತ್ವದ ಟಿಪ್ಪು ಜಯಂತಿ ಆಚರಿಸುವುದನ್ನು ವಿರೋಧಿಸುವುದು ರಾಜಕೀಯಪ್ರೇರಿತವಾಗಿದೆ. ನಿಜವಾದ ದೇಶಭಕ್ತನನ್ನು ಮತಾಂಧ ಎನ್ನುವುದು, ಶಾಲಾ ಪಠ್ಯದಿಂದ ಅವರ ಕುರಿತ ಪಠ್ಯವನ್ನು ಕೈಬಿಡುವುದು ದುರದುಷ್ಟಕರ. ಸತ್ಯಕ್ಕಾಗಿ ಟಿಪ್ಪು ಬಗ್ಗೆ ಮತ್ತೊಮ್ಮೆ ಸಂಶೋಧನೆ ನಡೆಯಲಿ’ ಎಂದರು.