<p><strong>ಬೆಳಗಾವಿ</strong>: ‘ಬಿಜೆಪಿ ಸರ್ಕಾರವು ಪ್ರಶಸ್ತಿಗಾಗಿ ಕಂಡಲೆಲ್ಲಾ ಶೌಚಾಲಯಗಳನ್ನು ನಿರ್ಮಿಸಿ ಅಂಕ ತೆಗೆದುಕೊಂಡಿದೆ. ಅವು ನಿರ್ವಹಣೆ ಮತ್ತು ನೀರಿನ ವ್ಯವಸ್ಥೆ ಇಲ್ಲದೆ ಹಾಳಾಗಿವೆ. ಲೆಕ್ಕಕ್ಕೆ ಮಾತ್ರ ಎನ್ನುವಂತಾಗಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.</p>.<p>ಇಲ್ಲಿನ ಕಾಂಗ್ರೆಸ್ ಭವನದಲ್ಲಿ ರಾಜೀವ್ಗಾಂಧಿ ಪಂಚಾಯತ್ ಸಂಘಟನೆ ವತಿಯಿಂದ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಿಟ್ಟಿ ಪ್ರಚಾರ ಮಾಡುತ್ತಿದೆ. ಮನಮೋಹನ್ ಸಿಂಗ್ ನೇತೃತ್ವದ ನಮ್ಮ ಸರ್ಕಾರ ಇದ್ದಾಗ ಸ್ವಚ್ಛ ಭಾರತ ಯೋಜನೆ ಜೊತೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದಕ್ಕಾಗಿ ವರ್ಷಕ್ಕೆ ₹33ಸಾವಿರ ಕೋಟಿ ಅನುದಾನ ಬಿಡುಗಡೆ ಕೂಡ ಆಗಿದೆ. ದೇಶಕ್ಕೆ ಸಾಕಷ್ಟು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಈ ಯೋಜನೆಗಳನ್ನು ಈಗ ಮುಂದುವರಿಸಲಾಗಿದೆ. ಆದರೆ, ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿಕೊಳ್ಳಲಾಗುತ್ತಿದೆ. ಈ ಸರ್ಕಾರವು ಶೌಚಾಲಯ, ಯೋಗ ಎಂದು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ’ ಎಂದು ಟೀಕಿಸಿದರು.</p>.<p>ಏನು ಮಾಡಿದ್ದಾರೆ?:</p>.<p>‘ಬಿಜೆಪಿ ಅಪ್ರಚಾರ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಪ್ರಚಾರ ಮಾಡಬೇಕು. ಹಳ್ಳಿ-ಹಳ್ಳಿಗೂ ತೆರಳಿ ರಾಜೀವ್ಗಾಂಧಿ ಪಂಚಾಯತ್ರಾಜ್ ಯೋಜನೆಗಳನ್ನು ಜನರಿಗೆ ತಿಳಿಸಬೇಕು’ ಎಂದು ಸೂಚಿಸಿದರು.</p>.<p>‘ಮೋದಿ ಏಳು ವರ್ಷಗಳಲ್ಲಿ ಏನು ಮಾಡಿದ್ದಾರೆ? ಅವರ ತವರು ರಾಜ್ಯ ಗುಜರಾತ್ನಲ್ಲಿ ಕಂಡಲೆಲ್ಲಾ ಕಸದ ರಾಶಿ ಬಿದ್ದಿದೆ. ಇನ್ನು ದೇಶವನ್ನು ಹೇಗೆ ಸ್ವಚ್ಛ ಮಾಡುತ್ತಾರೆ?’ ಎಂದು ಕೇಳಿದರು.</p>.<p>‘ಗ್ರಾಮ ಪಂಚಾಯ್ತಿಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಆಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಆ ಅನುದಾನವನ್ನು ಗ್ರಾಮೀಣ ಜನತೆಗೆ ತಲುಪಿಸುವ ಪ್ರಯತ್ನ ಮಾಡಬೇಕು. ಯಾವ ಇಲಾಖೆಯಲ್ಲಿ ಏನೆನು ಕೆಲಸಗಳು ಆಗುತ್ತವೆ ಎಂದು ಅರಿಯಬೇಕು. ಸಾಮಾನ್ಯ ಜ್ಞಾನದ ಕೊರತೆ ನೀಗಿಸಿಕೊಳ್ಳಬೇಕು. ಕಾನೂನು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಗ್ರಾಮೀಣ ಮಟ್ಟದಲ್ಲಿ ಬಡ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳನ್ನು ಕಟ್ಟಿಕೊಳ್ಳಲು ಸಹಕಾರ ನೀಡಬೇಕು. ನಿತ್ಯವೂ ಅವರ ಸಮಸ್ಯೆ ಆಲಿಸಬೇಕು. ಹಳ್ಳಿಗಳಲ್ಲಿರುವ ಸಮಸ್ಯೆ ಅರಿತುಕೊಂಡು ಫಲಾನುಭಗಳಿಗೆ ಪರಿಹಾರ ತಲುಪಿಸುವ ಪ್ರಯತ್ನ ಮಾಡೋಣ’ ಎಂದರು.</p>.<p>ರಾಜೀವ್ಗಾಂಧಿ ಪಂಚಾಯತ್ ಸಂಘಟನೆ ರಾಜ್ಯ ಸಂಚಾಲಕರಾದ ವಿಜಯಸಿಂಗ್, ಬಿನಿತಾ ಓರಾ, ಬಿ.ಎಂ. ಸಂದೀಪ್, ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಡಿ.ಆರ್. ಪಾಟೀಲ, ಲಕ್ಷ್ಮಣರಾವ್ ಚಿಂಗಳೆ, ವೀರಕುಮಾರ ಪಾಟೀಲ, ಮಹಾವೀರ ಮೋಹಿತೆ, ಉಮೇಶ ಬಾಳಿ, ಸುನೀಲ ಹನಮ್ಮನ್ನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬಿಜೆಪಿ ಸರ್ಕಾರವು ಪ್ರಶಸ್ತಿಗಾಗಿ ಕಂಡಲೆಲ್ಲಾ ಶೌಚಾಲಯಗಳನ್ನು ನಿರ್ಮಿಸಿ ಅಂಕ ತೆಗೆದುಕೊಂಡಿದೆ. ಅವು ನಿರ್ವಹಣೆ ಮತ್ತು ನೀರಿನ ವ್ಯವಸ್ಥೆ ಇಲ್ಲದೆ ಹಾಳಾಗಿವೆ. ಲೆಕ್ಕಕ್ಕೆ ಮಾತ್ರ ಎನ್ನುವಂತಾಗಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.</p>.<p>ಇಲ್ಲಿನ ಕಾಂಗ್ರೆಸ್ ಭವನದಲ್ಲಿ ರಾಜೀವ್ಗಾಂಧಿ ಪಂಚಾಯತ್ ಸಂಘಟನೆ ವತಿಯಿಂದ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬಿಟ್ಟಿ ಪ್ರಚಾರ ಮಾಡುತ್ತಿದೆ. ಮನಮೋಹನ್ ಸಿಂಗ್ ನೇತೃತ್ವದ ನಮ್ಮ ಸರ್ಕಾರ ಇದ್ದಾಗ ಸ್ವಚ್ಛ ಭಾರತ ಯೋಜನೆ ಜೊತೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದಕ್ಕಾಗಿ ವರ್ಷಕ್ಕೆ ₹33ಸಾವಿರ ಕೋಟಿ ಅನುದಾನ ಬಿಡುಗಡೆ ಕೂಡ ಆಗಿದೆ. ದೇಶಕ್ಕೆ ಸಾಕಷ್ಟು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಈ ಯೋಜನೆಗಳನ್ನು ಈಗ ಮುಂದುವರಿಸಲಾಗಿದೆ. ಆದರೆ, ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿಕೊಳ್ಳಲಾಗುತ್ತಿದೆ. ಈ ಸರ್ಕಾರವು ಶೌಚಾಲಯ, ಯೋಗ ಎಂದು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ’ ಎಂದು ಟೀಕಿಸಿದರು.</p>.<p>ಏನು ಮಾಡಿದ್ದಾರೆ?:</p>.<p>‘ಬಿಜೆಪಿ ಅಪ್ರಚಾರ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಪ್ರಚಾರ ಮಾಡಬೇಕು. ಹಳ್ಳಿ-ಹಳ್ಳಿಗೂ ತೆರಳಿ ರಾಜೀವ್ಗಾಂಧಿ ಪಂಚಾಯತ್ರಾಜ್ ಯೋಜನೆಗಳನ್ನು ಜನರಿಗೆ ತಿಳಿಸಬೇಕು’ ಎಂದು ಸೂಚಿಸಿದರು.</p>.<p>‘ಮೋದಿ ಏಳು ವರ್ಷಗಳಲ್ಲಿ ಏನು ಮಾಡಿದ್ದಾರೆ? ಅವರ ತವರು ರಾಜ್ಯ ಗುಜರಾತ್ನಲ್ಲಿ ಕಂಡಲೆಲ್ಲಾ ಕಸದ ರಾಶಿ ಬಿದ್ದಿದೆ. ಇನ್ನು ದೇಶವನ್ನು ಹೇಗೆ ಸ್ವಚ್ಛ ಮಾಡುತ್ತಾರೆ?’ ಎಂದು ಕೇಳಿದರು.</p>.<p>‘ಗ್ರಾಮ ಪಂಚಾಯ್ತಿಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಆಗುತ್ತದೆ. ಕಾಂಗ್ರೆಸ್ ಕಾರ್ಯಕರ್ತರು ಆ ಅನುದಾನವನ್ನು ಗ್ರಾಮೀಣ ಜನತೆಗೆ ತಲುಪಿಸುವ ಪ್ರಯತ್ನ ಮಾಡಬೇಕು. ಯಾವ ಇಲಾಖೆಯಲ್ಲಿ ಏನೆನು ಕೆಲಸಗಳು ಆಗುತ್ತವೆ ಎಂದು ಅರಿಯಬೇಕು. ಸಾಮಾನ್ಯ ಜ್ಞಾನದ ಕೊರತೆ ನೀಗಿಸಿಕೊಳ್ಳಬೇಕು. ಕಾನೂನು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಗ್ರಾಮೀಣ ಮಟ್ಟದಲ್ಲಿ ಬಡ ಮಹಿಳೆಯರಿಗೆ ಸ್ವ-ಸಹಾಯ ಸಂಘಗಳನ್ನು ಕಟ್ಟಿಕೊಳ್ಳಲು ಸಹಕಾರ ನೀಡಬೇಕು. ನಿತ್ಯವೂ ಅವರ ಸಮಸ್ಯೆ ಆಲಿಸಬೇಕು. ಹಳ್ಳಿಗಳಲ್ಲಿರುವ ಸಮಸ್ಯೆ ಅರಿತುಕೊಂಡು ಫಲಾನುಭಗಳಿಗೆ ಪರಿಹಾರ ತಲುಪಿಸುವ ಪ್ರಯತ್ನ ಮಾಡೋಣ’ ಎಂದರು.</p>.<p>ರಾಜೀವ್ಗಾಂಧಿ ಪಂಚಾಯತ್ ಸಂಘಟನೆ ರಾಜ್ಯ ಸಂಚಾಲಕರಾದ ವಿಜಯಸಿಂಗ್, ಬಿನಿತಾ ಓರಾ, ಬಿ.ಎಂ. ಸಂದೀಪ್, ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ಡಿ.ಆರ್. ಪಾಟೀಲ, ಲಕ್ಷ್ಮಣರಾವ್ ಚಿಂಗಳೆ, ವೀರಕುಮಾರ ಪಾಟೀಲ, ಮಹಾವೀರ ಮೋಹಿತೆ, ಉಮೇಶ ಬಾಳಿ, ಸುನೀಲ ಹನಮ್ಮನ್ನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>