<p><strong>ಬೆಳಗಾವಿ</strong>: ನಗರದಲ್ಲಿ ಶನಿವಾರ ಸಂಜೆ ಗುಡುಗು–ಮಿಂಚು ಸಹಿತವಾಗಿ ಒಂದು ತಾಸಿಗೂ ಅಧಿಕ ಸುರಿದ ಧಾರಾಕಾರ ಮಳೆಯಿಂದಾಗಿ ಜನರು ಪರದಾಡಿದರು.</p><p>ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ವರುಣ ಅಬ್ಬರಿಸಿದ್ದರಿಂದ ತಗ್ಗು ಪ್ರದೇಶದಲ್ಲಿರುವ ಅಂಗಡಿ–ಮುಂಗಟ್ಟು ಮತ್ತು ಮನೆಗಳಿಗೆ ನೀರು ನುಗ್ಗಿತು. ನೀರು ಹೊರಹಾಕಲು ಜನರು ಪ್ರಯಾಸಪಟ್ಟರು. ಮತ್ತೊಂದೆಡೆ, ಮುಖ್ಯ ರಸ್ತೆಗಳಲ್ಲೇ ನೀರು ಸರಾಗವಾಗಿ ಹರಿದುಹೋಗದೆ ನಿಂತಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.</p><p>ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗದ್ದರಿಂದ ಪಾಂಗುಳ ಗಲ್ಲಿ, ಭೋವಿ ಗಲ್ಲಿ, ನರಗುಂದಕರ ಭಾವೆ ಚೌಕ್, ಕೋಟೆ ರಸ್ತೆಯಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯಿತು. ಭೆಂಡಿ ಬಜಾರ್ ವೃತ್ತದಲ್ಲಿ ಮರ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೊಡಕಾಯಿತು.</p><p>ವಿವಿಧ ವಸ್ತುಗಳ ಖರೀದಿಗಾಗಿ ಅಪಾರ ಸಂಖ್ಯೆಯಲ್ಲಿ ಗ್ರಾಹಕರು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರು. ಜೋರಾಗಿ ಮಳೆ ಸುರಿದಿದ್ದರಿಂದ ಆಶ್ರಯಕ್ಕಾಗಿ ಅವರು ಪರದಾಡಿದರು. ರಸ್ತೆಬದಿ ಮಾರಾಟ ಮಾಡುತ್ತಿದ್ದವರ ತರಕಾರಿಗಳು ನೀರು ಪಾಲಾದವು.</p><p>ಹಲವೆಡೆ ಮಳೆ: ನಿಪ್ಪಾಣಿ, ಮುನವಳ್ಳಿ, ಚನ್ನಮ್ಮನ ಕಿತ್ತೂರಿನಲ್ಲಿ ಗುಡುಗು–ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು. ಬೈಲಹೊಂಗಲದಲ್ಲಿ ಸಾಧರಣ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರದಲ್ಲಿ ಶನಿವಾರ ಸಂಜೆ ಗುಡುಗು–ಮಿಂಚು ಸಹಿತವಾಗಿ ಒಂದು ತಾಸಿಗೂ ಅಧಿಕ ಸುರಿದ ಧಾರಾಕಾರ ಮಳೆಯಿಂದಾಗಿ ಜನರು ಪರದಾಡಿದರು.</p><p>ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ವರುಣ ಅಬ್ಬರಿಸಿದ್ದರಿಂದ ತಗ್ಗು ಪ್ರದೇಶದಲ್ಲಿರುವ ಅಂಗಡಿ–ಮುಂಗಟ್ಟು ಮತ್ತು ಮನೆಗಳಿಗೆ ನೀರು ನುಗ್ಗಿತು. ನೀರು ಹೊರಹಾಕಲು ಜನರು ಪ್ರಯಾಸಪಟ್ಟರು. ಮತ್ತೊಂದೆಡೆ, ಮುಖ್ಯ ರಸ್ತೆಗಳಲ್ಲೇ ನೀರು ಸರಾಗವಾಗಿ ಹರಿದುಹೋಗದೆ ನಿಂತಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದರು.</p><p>ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗದ್ದರಿಂದ ಪಾಂಗುಳ ಗಲ್ಲಿ, ಭೋವಿ ಗಲ್ಲಿ, ನರಗುಂದಕರ ಭಾವೆ ಚೌಕ್, ಕೋಟೆ ರಸ್ತೆಯಲ್ಲಿ ಕೊಳಚೆ ನೀರು ರಸ್ತೆ ಮೇಲೆ ಹರಿಯಿತು. ಭೆಂಡಿ ಬಜಾರ್ ವೃತ್ತದಲ್ಲಿ ಮರ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೊಡಕಾಯಿತು.</p><p>ವಿವಿಧ ವಸ್ತುಗಳ ಖರೀದಿಗಾಗಿ ಅಪಾರ ಸಂಖ್ಯೆಯಲ್ಲಿ ಗ್ರಾಹಕರು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರು. ಜೋರಾಗಿ ಮಳೆ ಸುರಿದಿದ್ದರಿಂದ ಆಶ್ರಯಕ್ಕಾಗಿ ಅವರು ಪರದಾಡಿದರು. ರಸ್ತೆಬದಿ ಮಾರಾಟ ಮಾಡುತ್ತಿದ್ದವರ ತರಕಾರಿಗಳು ನೀರು ಪಾಲಾದವು.</p><p>ಹಲವೆಡೆ ಮಳೆ: ನಿಪ್ಪಾಣಿ, ಮುನವಳ್ಳಿ, ಚನ್ನಮ್ಮನ ಕಿತ್ತೂರಿನಲ್ಲಿ ಗುಡುಗು–ಮಿಂಚು ಸಹಿತವಾಗಿ ಉತ್ತಮ ಮಳೆ ಸುರಿಯಿತು. ಬೈಲಹೊಂಗಲದಲ್ಲಿ ಸಾಧರಣ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>