ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇ 7ರಂದು ಬೆಳಿಗ್ಗೆ 11ಕ್ಕೆ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ತೋಂಟದಾರ್ಯ ಮಠದ ಶಿವಮೂರ್ತಿ ದೇವರ ಪಟ್ಟಾಧಿಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಕ್ಕೆ ನಗರದ ಪಕ್ಷದ ಕಚೇರಿಯಲ್ಲಿ ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಮುಖಂಡರ ಸಭೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಪ್ರಕಟಣೆಯುಲ್ಲಿ ತಿಳಿಸಿದ್ದಾರೆ.